ಸಂಗ್ರಹ ಚಿತ್ರ 
ರಾಜಕೀಯ

ಬಿಜೆಪಿಯಲ್ಲೇ ಇರುವೆ, ಆದರೆ ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ: ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟನೆ

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿಯ ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ನಡುವಿನ ರಾಜಕೀಯ ವೈಮನಸ್ಸು ಮತ್ತಷ್ಟು ಹೆಚ್ಚಾಗಿದೆ.

ವಿಜಯಪುರ: ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿಯ ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ನಡುವಿನ ರಾಜಕೀಯ ವೈಮನಸ್ಸು ಮತ್ತಷ್ಟು ಹೆಚ್ಚಾಗಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಪಟ್ಟಣಶೆಟ್ಟಿ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪಕ್ಷದಲ್ಲಿಯೇ ಉಳಿಯಲು ನಿರ್ಧರಿಸಿದ್ದೇನೆ. ಆದರೆ, ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ. ಯತ್ನಾಳ್ ಅವರನ್ನು ಹೊರತುಪಡಿಸಿ ಪಕ್ಷದ ಇತರೆ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆಂದು ಹೇಳಿದ್ದಾರೆ.

ಯತ್ನಾಳ್ ನನ್ನನ್ನು ಮತ್ತು ನನ್ನ ಬೆಂಬಲಿಗರನ್ನು ಪ್ರಚಾರದಿಂದ ಸಂಪೂರ್ಣವಾಗಿ ದೂರ ಇಟ್ಟಿದ್ದಾರೆ. ಅವರಿಗೆ ಇದೀಗ ನನ್ನ ಮತ್ತು ನನ್ನ ಬೆಂಬಲಿಗರ ಅಗತ್ಯವಿಲ್ಲ. ಹೀಗಾಗಿ ಅವರ ಪರ ಪ್ರಚಾರ ಮಾಡುವ ಅವಶ್ಯಕತೆ ನನಗೂ ಇಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಇತರ ಏಳು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ನನ್ನನ್ನು ಪ್ರಚಾರಕ್ಕೆ ಆಹ್ವಾನಿಸಿದ್ದಾರೆ. ಅವರ ಪರ ಪ್ರಚಾರ ಮಾಡುತ್ತೇನೆಂದು ಹೇಳಿದರು.

ಹಲವು ಬಾರಿ ಪ್ರಯತ್ನ ಮಾಡಿದರೂ ಪಕ್ಷವು ನನಗೆ ಟಿಕೆಟ್ ನಿರಾಕರಿಸಿದ್ದು, ಇದು ನನಗೆ ನೋವುಂಟು ಮಾಡಿದೆ. ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲು ಬೆಂಬಲಿಗರ ಸಭೆ ಕರೆದಿದ್ದೇನೆ. ಸಭೆ ಬಳಿಕ ನಿರ್ಧಾರ ಕೈಗೊಳ್ಳುತ್ತೇನೆಂದರು.

ಚುನಾವಣೆಯಲ್ಲಿ ಯತ್ನಾಳ್‌ಗೆ ಮತ ಹಾಕದಿರುವ ಬಣಜಿಗ ಸಮುದಾಯದ ನಿರ್ಧಾರ ಕುರಿತು ಮಾತನಾಡಿ, ಇದು ಸಮುದಾಯದ ನಿರ್ಧಾರ, ಅದನ್ನು ಬೆಂಬಲಿಸುವುದಿಲ್ಲ ಮತ್ತು ವಿರೋಧಿಸುವುದೂ ಇಲ್ಲ ಎಂದರು.

ನಾನು ಎಂದಿಗೂ ಜಾತಿ ರಾಜಕೀಯವನ್ನು ಮಾಡುವುದಿಲ್ಲ. ಏಕೆಂದರೆ ನಾನು ಯಾವಾಗಲೂ ಅಂತರ್ಗತ ರಾಜಕೀಯದಲ್ಲಿ ನಂಬಿಕೆ ಹೊಂದಿದ್ದೇನೆ, ಆದರೆ, ಇಂದು ಜಾತಿ ರಾಜಕೀಯವು ವಾಸ್ತವಕ್ಕೆ ತಿರುಗಿದೆ. ರಾಜಕೀಯ ಪಕ್ಷಗಳು ತಮ್ಮ ಸಮುದಾಯದ ಆಕಾಂಕ್ಷಿಗಳಿಗೆ ಟಿಕೆಟ್ ನಿರಾಕರಿಸಿದಾಗ ಸಮಾಜದ ಮುಖಂಡರಿಗೆ ನೋವಾಗುವುದು ಸಹಜ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT