ಗುರುರಾಜ್ ಗಂಟಿಹೊಳೆ 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ₹ 7 ಕೋಟಿಗೂ ಅಧಿಕ ಮೌಲ್ಯದ ಸ್ಥಿರಾಸ್ತಿ ಘೋಷಿಸಿದ ‘ಬರಿಗಾಲಿನ’ ಬಿಜೆಪಿ ಅಭ್ಯರ್ಥಿ

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಕಳೆದ 20 ವರ್ಷಗಳಿಂದ ಬರಿಗಾಲಿನಲ್ಲಿ ನಡೆಯುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು ಸರಳ ರಾಜಕಾರಣಿ ಎಂದೇ ಕರೆಯುತ್ತಾರೆ. 

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಕಳೆದ 20 ವರ್ಷಗಳಿಂದ ಬರಿಗಾಲಿನಲ್ಲಿ ನಡೆಯುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು ಸರಳ ರಾಜಕಾರಣಿ ಎಂದೇ ಕರೆಯುತ್ತಾರೆ. 'ನಾನು ಸದಾ ಎಲ್ಲೆಂದರಲ್ಲಿ ಬರಿಗಾಲಿನಲ್ಲಿ ನಡೆದಾಡುವ ನನ್ನ ಅಭ್ಯಾಸಕ್ಕೆ ವಿಶೇಷ ಅಭಿಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ ಎನ್ನುತ್ತಾರೆ ಗುರುರಾಜ್. 

ಜನರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಸ್ವತಃ ಜಾಗೃತರಾಗಿರಲು ಮತ್ತು ಅರಿವು ಮೂಡಿಸಲು ನಾನು ಬರಿಗಾಲಿನಲ್ಲಿ ನಡೆಯುತ್ತೇನೆ ಮತ್ತು ಈ ಅಭ್ಯಾಸವು ಸಮಾಜದಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡಲು ತನ್ನ ಕರ್ತವ್ಯಗಳನ್ನು ಪದೇ ಪದೆ ನೆನಪಿಸುತ್ತದೆ ಎನ್ನುತ್ತಾರೆ ಅವರು.

ಗುರುರಾಜ್ ಆರಂಭದಲ್ಲಿ ಕೊಡಗಿನಲ್ಲಿ ಆರ್‌ಎಸ್‌ಎಸ್ ಪ್ರಚಾರಕರಾಗಿ ಕೆಲಸ ಮಾಡಿ ನಂತರ ಕೇರಳ, ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣಕ್ಕೆ ತೆರಳಿದ್ದರು.

ಗುರುರಾಜ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ 7.28 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಘೋಷಿಸಿದ್ದಾರೆ. ಗುರುರಾಜ್ ಅವರು ಕುಮಟಾ ತಾಲೂಕಿನ ಗೋಡಂಬಿ ಸಂಸ್ಥೆಯೊಂದರಲ್ಲಿ ಶೇ 45 ರಷ್ಟು ಪಾಲು ಹೊಂದಿದ್ದು, ಅದಕ್ಕಾಗಿ 2012ರಲ್ಲಿ 89.64 ಲಕ್ಷ ರೂ. ಪಾವತಿಸಿ ಜಮೀನು ಖರೀದಿಸಿದ್ದಾರೆ. ಇದನ್ನು ಅಭಿವೃದ್ಧಿಪಡಿಸಲು ಇದೇ ಸಂಸ್ಥೆಯಲ್ಲಿ 2.56 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಈಗ ಸಂಸ್ಥೆಯಲ್ಲಿನ ಅವರ ಒಟ್ಟು ಪಾಲಿನ ಅಂದಾಜು ಮೌಲ್ಯ 7.28 ಕೋಟಿ ರೂ. ಆಗಿದೆ. ಗುರುರಾಜ್ ಅವರು ವೈಯಕ್ತಿಕವಾಗಿ 1.64 ಕೋಟಿರೂ. ಸಾಲವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ಬೈಂದೂರು ಕ್ಷೇತ್ರದ ಹಾಲಿ ಶಾಸಕ ಬಿಎಂ ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಗುರುರಾಜ್ ಗಂಟಿಹೊಳೆ ಅವರಿಗೆ ಬಿಜೆಪಿ ಟಿಕೆಟ್ ನೀಡಿ ಅಭ್ಯರ್ಥಿಯನ್ನಾಗಿ ಮಾಡಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಗಂಟಿಹೊಳೆ ಅವರು 32.7 ಲಕ್ಷ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ ಮತ್ತು ಸಂಸ್ಥೆಯಲ್ಲಿ 7.2 ಕೋಟಿ ಮೌಲ್ಯದ ಶೇ 45ರಷ್ಟು ಪಾಲು ಹೊಂದಿರುವುದಾಗಿ ಉಲ್ಲೇಖಿಸಿದ್ದಾರೆ.

ಗಂಟಿಹೊಳೆ 1.7 ಲಕ್ಷ ರೂ. ಮೌಲ್ಯದ ಚರಾಸ್ತಿಯನ್ನು ಹೊಂದಿದ್ದರೆ, ಅವರ ಪತ್ನಿ ಅನುರಾಧ ಶೆಟ್ಟಿ ಅವರು 18.7 ಲಕ್ಷ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. 42 ವರ್ಷ ವಯಸ್ಸಿನ ಗಂಟಿಹೊಳೆ ಅವರು 1.6 ಕೋಟಿ ರೂ. (ವೈಯಕ್ತಿಕ) ಮತ್ತು 9.1 ಕೋಟಿ ರೂ. (ಸಂಸ್ಥೆಯ ಹೊಣೆಗಾರಿಕೆ) ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. 

ಗಂಟಿಹೊಳೆ ಅವರು ತಮ್ಮ ಅಫಿಡವಿಟ್‌ನಲ್ಲಿ ಚೆಕ್‌ಗೆ ಗೌರವ ಕೊಡದ ಆರೋಪದ ಮೇಲೆ ನ್ಯಾಯಾಲಯದಿಂದ ದೋಷಿ ಎಂದು ಉಲ್ಲೇಖಿಸಿದ್ದಾರೆ ಮತ್ತು 6 ಲಕ್ಷ ರೂ. ದಂಡಕ್ಕೆ ಪಾತ್ರರಾಗಿದ್ದಾರೆ. ಆದರೆ, ಕೆಳ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲಾಗಿದ್ದು, ಸದ್ಯ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT