ಪ್ರಾತಿನಿಧಿಕ ಚಿತ್ರ 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಹೊಸ ಮುಖಗಳಿಗೆ ಬಿಜೆಪಿ ಮಣೆ; ಹಾಲಿ ಶಾಸಕರ ವಿರುದ್ಧ ಅಲೆ, ಪಕ್ಷಕ್ಕೆ 'ಪ್ಲಸ್' ಆಗಲಿದೆ ಎಂದ ಸಮೀಕ್ಷೆ

ಹಾಲಿ ಶಾಸಕರನ್ನು ಕೆಳಗಿಳಿಸಿ ಕೆಲವು ಹೊಸ ಮುಖಗಳಿಗೆ ಟಿಕೆಟ್ ನೀಡಿರುವ ಬಿಜೆಪಿಯ ನಿರ್ಧಾರದಿಂದ ಕೆಲವು ನಾಯಕರಿಗೆ ಅಸಮಾಧಾನ ಉಂಟುಮಾಡಿತು. ಆದರೆ, ಇದು ಪಕ್ಷದ ಭವಿಷ್ಯವನ್ನು ಭದ್ರವಾಗಿಡಲು ಸಹಾಯ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆಯೊಂದು ಹೇಳಿದೆ.

ಬೆಂಗಳೂರು: ಹಾಲಿ ಶಾಸಕರನ್ನು ಕೆಳಗಿಳಿಸಿ ಕೆಲವು ಹೊಸ ಮುಖಗಳಿಗೆ ಟಿಕೆಟ್ ನೀಡಿರುವ ಬಿಜೆಪಿಯ ನಿರ್ಧಾರದಿಂದ ಕೆಲವು ನಾಯಕರಿಗೆ ಅಸಮಾಧಾನ ಉಂಟುಮಾಡಿತು. ಆದರೆ, ಇದು ಪಕ್ಷದ ಭವಿಷ್ಯವನ್ನು ಭದ್ರವಾಗಿಡಲು ಸಹಾಯ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆಯೊಂದು ಹೇಳಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಿಎನ್‌ಎಸ್‌ಇ ಜೊತೆಗೆ ಮಾತನಾಡಿ, ಹೊಸ ಮುಖಗಳನ್ನು ಕಣಕ್ಕಿಳಿಸಿದ ನಂತರ ಪಕ್ಷದ ಇತ್ತೀಚಿನ ಸಮೀಕ್ಷೆಯು 116 ಕ್ಷೇತ್ರಗಳಲ್ಲಿ ಗೆಲುವು ದೊರಕಲಿದೆ ಎಂದು ತೋರಿಸಿದೆ. ಈ ನಿರ್ಧಾರವು ಪಕ್ಷದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರಿದೆ ಮತ್ತು ಪ್ರಧಾನಿ ಮೋದಿ ಮತ್ತು ಇತರ ಕೇಂದ್ರ ನಾಯಕರು ರಾಜ್ಯದಲ್ಲಿ ರ‍್ಯಾಲಿಗಳನ್ನು ನಡೆಸಿದ ನಂತರ ಪಕ್ಷದ ಸಂಖ್ಯೆಯು ಮತ್ತಷ್ಟು ಹೆಚ್ಚಾಗುತ್ತದೆ ಎಂದು ಅವರು ಹೇಳಿದರು. 
ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಾದ್ಯಂತ 20 ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸವಾಲಿನ ಸಂದರ್ಭದಲ್ಲೂ ಚುನಾವಣೆಯಲ್ಲಿ ಗೆದ್ದ ಅನುಭವವಿರುವ ಮಾಜಿ ಸಚಿವರು, ರಾಜ್ಯಾಧ್ಯಕ್ಷರು, ಮಾಜಿ ಸಚಿವರು ಸೇರಿದಂತೆ ಪಕ್ಷದ ಮುಖಂಡರನ್ನು ಎಲ್ಲಾ ಜಿಲ್ಲೆಗಳು ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಕಾರ್ಯದ ಮೇಲ್ವಿಚಾರಣೆಗೆ ನಿಯೋಜಿಸಲಾಗಿದೆ. ಕಳೆದೊಂದು ವಾರದಿಂದ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆ ನಾಯಕರೊಂದಿಗೆ ಸಭೆ ನಡೆಸಿ ಅವರಿಂದ ಗ್ರೌಂಡ್ ರಿಪೋರ್ಟ್ ಪಡೆದಿದ್ದಾರೆ. 'ಆ ವರದಿಯೂ ನಮಗೆ ಅನುಕೂಲಕರವಾಗಿದೆ' ಎಂದು ಅವರು ಹೇಳಿದರು.

ಬಿಜೆಪಿಯು ತನ್ನ ಹಲವು ಶಾಸಕರ ವಿರುದ್ಧದ ಆಡಳಿತ ವಿರೋಧಿ ಅಲೆಯನ್ನು ಶಮನಗೊಳಿಸಲು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಡಬಲ್ ಇಂಜಿನ್ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಬಲವಾದ ಸಂಘಟನಾ ಶಕ್ತಿಯು ಪಕ್ಷಕ್ಕೆ ಸ್ಪಷ್ಟ ಬಹುಮತ ಪಡೆಯಲು ಸಹಾಯ ಮಾಡುತ್ತದೆ. ಲಿಂಗಾಯತ ನಾಯಕರನ್ನು ಬಿಜೆಪಿ ಬದಿಗಿಟ್ಟಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಸಂಬಂಧಿಸಿದಂತೆ, ಲಿಂಗಾಯತರನ್ನು ಅವಮಾನಿಸಲಾಗಿದೆ ಎಂಬ ಕಾಂಗ್ರೆಸ್‌‌ನ ತಪ್ಪು ಪ್ರಚಾರದಿಂದ ನಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ವೀರೇಂದ್ರ ಪಾಟೀಲರನ್ನು ಅವಮಾನಿಸಿದರು, ವೀರಶೈವ-ಲಿಂಗಾಯತರನ್ನು ವಿಭಜಿಸಲು ಪ್ರಯತ್ನಿಸಿದರು ಮತ್ತು ಅವರು ಎಂದಿಗೂ ಸಮುದಾಯವನ್ನು ಗೌರವಿಸಲಿಲ್ಲ. ಬಿಜೆಪಿ ಸರ್ಕಾರವು ಎಲ್ಲಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸಿದೆ. ರಾಜ್ಯದಲ್ಲಿ ಬಿಜೆಪಿ ಅಲ್ಪಾವಧಿ ಅಧಿಕಾರದಲ್ಲಿದ್ದರೂ ಸಮುದಾಯದ ಮೂವರು ನಾಯಕರನ್ನು ಸಿಎಂ ಮಾಡಲಾಗಿದೆ. ಈಗಲೂ ಸಿಎಂ ಲಿಂಗಾಯತ ಸಮುದಾಯದವರಾಗಿದ್ದು, ಮುಂದಿನ ಸಿಎಂ ಆ ಸಮುದಾಯದವರಾಗಿದ್ದರೆ ಬಿಜೆಪಿ ಮಾತ್ರ ಅಧಿಕಾರ ಹಿಡಿಯಲು ಸಾಧ್ಯವೇ ಹೊರತು ಕಾಂಗ್ರೆಸ್ ಅಥವಾ ಯಾವುದೇ ಪಕ್ಷವಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT