ಶ್ರೀನಿವಾಸ ಪ್ರಸಾದ್ 
ರಾಜಕೀಯ

ಸಿದ್ದರಾಮಯ್ಯ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆ ಆಗ್ಬಿಡುತ್ತೆ: ಶ್ರೀನಿವಾಸ್ ಪ್ರಸಾದ್ ಲೇವಡಿ

ಸಿದ್ದರಾಮಯ್ಯ ಗುಡುಗಿದ್ರೆ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ ಎಂದು ಚಾಮರಾಜನಗರದ ವಿ. ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ.

ಮೈಸೂರು: ಸಿದ್ದರಾಮಯ್ಯ ಗುಡುಗಿದ್ರೆ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ ಎಂದು ಚಾಮರಾಜನಗರದ ವಿ. ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರದ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಗುಡುಗಿದ್ರೆ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗುತ್ತೆ. ಲೋಕಸಭೆಯಲ್ಲೂ ರಾಹುಲ್ ಗಾಂಧಿನ ನಿಲ್ಲಿಸಿಕೊಂಡು ಗುಡುಗಿದ್ರು, ಮೋದಿ ಮುಳುಗೇಹೋದರು ಅನ್ನೋಹಾಗೇ ಗುಡುಗಿದ್ರು. ಕೊನೆಗೆ ಏನಾಯ್ತು? ರಾಜ್ಯದಲ್ಲಿ ಕೇವಲ 1 ಸೀಟು ಗೆದ್ದರು ಎಂದು ವ್ಯಂಗ್ಯವಾಡಿದರು.

ಗುಡುಗಿ.. ಗುಡುಗಿ.. 30 ಸಾವಿರ ವೋಟ್‌ನಲ್ಲಿ ಸೋತರು. ವರುಣಾ ಕ್ಷೇತ್ರದಲ್ಲಿ 1 ಲಕ್ಷ ವೋಟ್ ಗೆಲ್ಲೋಕೆ ಸಾಧ್ಯನಾ? ಪ್ರತಿಪಕ್ಷ ನಾಯಕನಾಗಿ ಮಾತನಾಡುವ ಮಾತಾ ಅದು? ಸೋಮಣ್ಣ ಹೊರಗಿನವರು ಅನ್ನೋ ಸಿದ್ದರಾಮಯ್ಯ, ತಾವು ಬಾದಾಮಿಗೆ ಯಾಕೆ ಹೋದ್ರು? ಎಂದು ಹೇಳಿದ್ದಾರೆ. 

ಇದೇ ವೇಳೆ ಬಿಜೆಪಿಯಲ್ಲಿ ಲಿಂಗಾಯತ ಮುಖ್ಯಮಂತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಮಿತ್ ಶಾ ಕೂಡ ಈ ಬಗ್ಗೆ ಮಾತನಾಡಬೇಡಿ ಅಂತಾ ಈಗಾಗಲೇ ಹೇಳಿದ್ದಾರೆ. ಮುಖ್ಯಮಂತ್ರಿ ಬಗ್ಗೆ ಫಲಿತಾಂಶದ ನಂತರ ಯೋಚನೆ ಮಾಡೋಣ ಅಂತಾ ಹೇಳಿದ್ದಾರೆ. ಫಲಿತಾಂಶದ ಮೇಲೆ ದಲಿತ ಸಿಎಂ, ಅಥವಾ ಲಿಂಗಾಯತ ಸಿಎಂ ಅನ್ನೋದು ನಿರ್ಧಾರವಾಗುತ್ತೆ. ಪಕ್ಷದ ವರಿಷ್ಠರು ಅದನ್ನ ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.

ಅನುಕಂಪವನ್ನು ಅಭಿವೃದ್ಧಿಗೆ ತಳುಕು ಹಾಕುವುದು ಸರಿಯಲ್ಲ
ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅನುಕಂಪ ವಿಚಾರವಾಗಿ ಮಾತನಾಡಿದ ಅವರು, ಧ್ರುವನಾರಾಯಣ್ ಹಾಗೂ ಅವರ ಪತ್ನಿ ಸಾವನ್ನಪ್ಪಿದ ಬಗ್ಗೆ ನಮಗೂ ಅನುಕಂಪವಿದೆ. ನಿಮಗೂ ಅನುಕಂಪವಿದೆ, ಎಲ್ಲರಿಗೂ ಅನುಕಂಪವಿದೆ‌. ಈ ಬಗ್ಗೆ ಪಕ್ಷಾತೀತವಾಗಿ ಅನುಕಂಪ ವ್ಯಕ್ತವಾಗಿದೆ. ಸಂಸದ ಪ್ರತಾಪ್ ಸಿಂಹ ಹಾಗೂ ನಾನು ಸಹ ಹೋಗಿ ಸಂತಾಪ ವ್ಯಕ್ತಪಡಿಸಿದ್ದೇವೆ. ಅನುಕಂಪದಿಂದಾಗಿ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮಾಯವಾಗಿ ಹೋಗುತ್ತವೆಯಾ ಎಂದು ಪ್ರಶ್ನಿಸಿದರು.

ಹರ್ಷವರ್ಧನ್ 500 ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ. ಇದನ್ನು ಸ್ವತಃ ಮುಖ್ಯಮಂತ್ರಿ ಹೇಳಿದ್ದಾರೆ. ಅನುಕಂಪದ ‌ನಡುವೆ, ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಲು ಆಗುತ್ತಾ ಹೇಳಿ ಎಂದರು. ಅನುಕಂಪವನ್ನು ಅಭಿವೃದ್ಧಿಗೆ ತಳುಕು ಹಾಕುವುದು ಸರಿಯಲ್ಲ. ಹಾಗಾದರೆ ಅಭಿವೃದ್ಧಿ ಕಾರ್ಯಗಳು ಲೆಕ್ಕಕ್ಕೇ ಬರಲ್ವಾ ಎಂಬ ಪ್ರಶ್ನೆಗೆ ನಾವು ಎಲ್ಲವನ್ನೂ ಜನರಿಗೆ ಬಿಡುತ್ತೇವೆ ಎಂದು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT