ಬೆಂಗಳೂರು: ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಟಿಕೆಟ್ನಲ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ತಮ್ಮ ಕ್ಷೇತ್ರದ ಜನರ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಮೂರ್ತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. "ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ಬಿಎಸ್ಪಿ ಟಿಕೆಟ್ನಲ್ಲಿ ಸ್ಪರ್ಧಿಸುತ್ತೇನೆ, ನನಗೆ ಗೆಲ್ಲುವ ವಿಶ್ವಾಸವಿದೆ" ಎಂದು ಹೇಳಿದ್ದಾರೆ.
ಕಾಂಗ್ರೆಸ್ ಕ್ಷೇತ್ರದಿಂದ ಮಹದೇವಪುರದ ಎಸಿ ಶ್ರೀನಿವಾಸ ಅವರನ್ನು ಕಣಕ್ಕಿಳಿಸಿದೆ. ಮೂರ್ತಿ, 2018 ರಲ್ಲಿ 81,626 ಮತಗಳಿಂದ ಗೆದ್ದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯತೀತ) ಬಿ ಪ್ರಸನ್ನ ಕುಮಾರ್ ವಿರುದ್ಧ ಅತಿ ಹೆಚ್ಚು ಅಂತರದಲ್ಲಿ ಗೆಲುವು ಸಾಧಿಸಿದ್ದರು.
ಇದನ್ನೂ ಓದಿ: ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಲ್ಲಿ 'ತಮಿಳು' ಮತಗಳೇ ನಿರ್ಣಾಯಕ: ರಿಜ್ವಾನ್ ಅರ್ಷದ್ ಸೋಲಿಸಲು 'ಬೇಗ್' ಹಿಮ್ಮೇಳ!
ಕಳೆದ ವಾರ ಮೂರ್ತಿ ಅವರು ಸುಮಾರು 2,36,000 ಜನಸಂಖ್ಯೆಯನ್ನು ಹೊಂದಿರುವ ಮೀಸಲು ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು, ಈ ಕ್ಷೇತ್ರದಲ್ಲಿ ಶೇ. 50 ರಷ್ಟು ಮುಸ್ಲಿಮರು ದಲಿತರು, ಹಿಂದೂಗಳು ಮತ್ತು ಇತರ ಸಮುದಾಯದವರಿದ್ದಾರೆ. ವಿಧಾನಸಭಾ ಕ್ಷೇತ್ರವು ಕಾವಲ್ಬೈರಸಂದ್ರ, ಎಸ್ಕೆ ಗಾರ್ಡನ್, ಡಿಜೆ ಹಳ್ಳಿ, ಮುನೀಶ್ವರನಗರ, ಕುಶಾಲನಗರ, ಸಗಾಯಪುರ ಮತ್ತು ಪುಲಕೇಶಿನಗರ ವಾರ್ಡ್ಗಳನ್ನು ಒಳಗೊಂಡಿದೆ.