ರಾಜಕೀಯ

ಶಿವಮೊಗ್ಗ: ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಲಿಂಗಾಯತ​ ಮುಖಂಡರ ಸಭೆ, ಈಶ್ವರಪ್ಪ ಭಾಗಿ

Manjula VN

ಹುಬ್ಬಳ್ಳಿ: ಲಿಂಗಾಯತ ಸಮುದಾಯದ ಇಬ್ಬರು ಹಿರಿಯ ನಾಯಕರು ಭಾರತೀಯ ಜನತಾ ಪಾರ್ಟಿಯಿಂದ ನಿರ್ಗಮಿಸಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಲಿಂಗಾಯತ ಮುಖಂಡರೊಂದಿಗೆ ಸೋಮವಾರ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ.

ನಾಲ್ಕು ದಿನಗಳ ಹಿಂದೆ ಕೂಡ ಯಡಿಯೂರಪ್ಪ ಅವರು, ಲಿಂಗಾಯತ ಮುಖಂಡರ ಜೊತೆ ಸಭೆ ನಡೆಸಿದ್ದರು. ಇದೀಗ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿರುವ ಕಚೇರಿಯಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಈ ಸಭೆಯಲ್ಲಿ ಮಾಜಿ ಸಚಿವ ಕೆಎಸ್​ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ವೀರಶೈವ ಸಮಾಜದ ಹಲವು ಮುಖಂಡರು ಭಾಗಿಯಾಗಿದ್ದು ಎಂದು ವರದಿಗಳು ತಿಳಿಸಿವೆ.

SCROLL FOR NEXT