ಪ್ರಹ್ಲಾದ್ ಜೋಶಿ 
ರಾಜಕೀಯ

ಹಳೇ ಪ್ಲೇಯರ್ ರಿಟೈರ್ಡ್ ಆಗಿ ಅಂದ್ರೆ ಬೇರೆ ಟೀಮ್‌ಗೆ ಹೋದ್ರು; ಶೆಟ್ಟರ್‌ ಬದಲಾಯಿಸಲು ತೀರ್ಮಾನಿಸಿದ್ದೇ ಮೋದಿ, ಅಮಿತ್‌ ಶಾ: ಜೋಶಿ

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌ ಅವರನ್ನು ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನಿಸಿದರುಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

​ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌ ಅವರನ್ನು ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನಿಸಿದರುಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಟಿಕೆಟ್‌ ತಪ್ಪಿಸಿರುವ ವಿಷಯ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ಗಮನಕ್ಕಿಲ್ಲ ಎಂದು ಪಕ್ಷ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ ಶೆಟ್ಟರ್‌ ಅವರ ಹೇಳಿಕೆಗ ಪ್ರತಿಕ್ರಿಯಿಸಿದ್ದಾರೆ.

ಅಮಿತ್‌ ಶಾ ಅವರು ಶೆಟ್ಟರ್‌ ಅವರಿಗೆ ದೂರವಾಣಿ ಕರೆ ಮಾಡಿ, ರಾಜ್ಯಸಭಾ ಸದಸ್ಯ ಸ್ಥಾನ ಅಥವಾ ನೀವು ಕೇಳುವ ಬೇರೆ ಯಾವುದಾದರೂ ಸ್ಥಾನ ನೀಡುತ್ತೇವೆ. ಚುನಾವಣೆಗೆ ಸ್ಪರ್ಧಿಸಲು ಹೊಸಬರಿಗೆ ಅವಕಾಶ ಮಾಡಿಕೊಡಿ. ನೀವು ಹೇಳುವ ಕಾರ್ಯಕರ್ತನಿಗೆ ಟಿಕೆಟ್‌ ನೀಡುತ್ತೇವೆ ಎಂದೂ ಹೇಳಿದ್ದರು ಎಂದು ವಿವರಿಸಿದರು.

ಜಗದೀಶ್‌ ಶೆಟ್ಟರ್‌ ಹೋಗಿರುವುದರಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ. ಹಳೆ ಪ್ಲೇಯರ್ ರಿಟೈರ್ಡ್ ಆಗಿ ಅಂದಿದ್ದೇವು. ಆದರೆ ಅವರು ಮತ್ತೊಂದು ಟೀಮ್ ನಲ್ಲಿ ಆಡೋಕೆ ಹೋಗಿದ್ದಾರೆ. ಆದರೂ ಈ ಸಲ ಕಪ್ ನಮ್ದೇ ಎಂದು ಜಗದೀಶ್‌ ಶೆಟ್ಟರ್ ವಿರುದ್ಧ ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT