ಅಮಿತ್ ಶಾ 
ರಾಜಕೀಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಗೆ ಕಾರಣವಾಗಲಿದೆ: ಅಮಿತ್ ಶಾ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ವಂಶಾಡಳಿತ ರಾಜಕೀಯ ಉತ್ತುಂಗಕ್ಕೇರಲಿದೆ ಮತ್ತು ಅದು ಗಲಭೆಗಳಿಗೆ ಕಾರಣವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ಬಾಗಲಕೋಟೆ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ವಂಶಾಡಳಿತ ರಾಜಕೀಯ ಉತ್ತುಂಗಕ್ಕೇರಲಿದೆ ಮತ್ತು ಅದು ಗಲಭೆಗಳಿಗೆ ಕಾರಣವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ತೇರದಾಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಚಿಸಿದರೆ ರಾಜ್ಯದ ಅಭಿವೃದ್ಧಿ 'ರಿವರ್ಸ್ ಗೇರ್' ಆಗಲಿದೆ ಎಂದು ಹೇಳಿದ್ದಾರೆ.

ಮೇ 10 ರಂದು ಮತದಾನ ನಡೆಯಲಿರುವ ಕರ್ನಾಟಕದಲ್ಲಿ 'ರಾಜಕೀಯ ಸ್ಥಿರತೆ'ಗಾಗಿ ಸ್ಪಷ್ಟ ಜನಾದೇಶ ಕೋರಿದ ಶಾ, ಬಿಜೆಪಿ ಮಾತ್ರ ರಾಜ್ಯವನ್ನು 'ನವ ಕರ್ನಾಟಕದತ್ತ ಕೊಂಡೊಯ್ಯಬಲ್ಲದು' ಎಂದು ಹೇಳಿದರು.

'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರಾಜವಂಶದ ರಾಜಕೀಯವು ಸಾರ್ವಕಾಲಿಕ ಉತ್ತುಂಗದಲ್ಲಿರುತ್ತದೆ ಮತ್ತು ಕರ್ನಾಟಕವು ಗಲಭೆಗಳಿಂದ ಪೀಡಿತವಾಗಲಿದೆ' ಎಂದು ಪಕ್ಷದ ಪ್ರಮುಖ ತಾರಾ ಪ್ರಚಾರಕರಲ್ಲಿ ಒಬ್ಬರಾದ ಶಾ ಹೇಳಿದರು.

'ಕಾಂಗ್ರೆಸ್ ತಪ್ಪಾಗಿ ಅಧಿಕಾರಕ್ಕೆ ಬಂದರೆ, ಭ್ರಷ್ಟಾಚಾರವು ಸಾರ್ವಕಾಲಿಕವಾಗಿ ಹೆಚ್ಚಾಗುತ್ತದೆ ಮತ್ತು 'ತುಷ್ಟೀಕರಣ'ದ ರಾಜಕೀಯ ಇರುತ್ತದೆ' ಎಂದು ಎಂದು ತಿಳಿಸಿದರು. 

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಅಮಿತ್ ಶಾ ಅವರು, ತಮ್ಮ ಪಕ್ಷದ ನಾಯಕರ ಜೊತೆ ಸಭೆ, ಸರಣಿ ಸಾರ್ವಜನಿಕ ಸಭೆಗಳು ಮತ್ತು ರೋಡ್‌ಶೋಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ದಕ್ಷಿಣದ ರಾಜ್ಯದಲ್ಲಿ ಸರ್ಕಾರ ರಚಿಸಲೇ ಬೇಕೆಂದು ಎಲ್ಲಾ ರೀತಿಯ ತಂತ್ರಗಳನ್ನು ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT