ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಶೆಟ್ಟರ್ ಸೋಲಿಸುವ ಜವಬ್ದಾರಿ ನನ್ನದು, ಲಕ್ಷ್ಮಣ ಸವದಿ ಸೋಲಿಸುವ ಜವಾಬ್ದಾರಿ ನಿಮ್ಮದು: ಬಿ ಎಸ್ ಯಡಿಯೂರಪ್ಪ

ಬಿಜೆಪಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಬಂಡಾಯವೆದ್ದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಮೇಲೆ ಬಿಜೆಪಿ ನಾಯಕರು ಜಿದ್ದಿಗೆ ಬಿದ್ದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ನಾಯಕರ ಮಧ್ಯೆ ದಿನಕ್ಕೊಂದು ಸೇಡಿನ ಮಾತುಗಳು ಹೊರಬರುತ್ತಲೇ ಇವೆ.

ಅಥಣಿ: ಬಿಜೆಪಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಬಂಡಾಯವೆದ್ದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಮೇಲೆ ಬಿಜೆಪಿ ನಾಯಕರು ಜಿದ್ದಿಗೆ ಬಿದ್ದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ನಾಯಕರ ಮಧ್ಯೆ ದಿನಕ್ಕೊಂದು ಸೇಡಿನ ಮಾತುಗಳು ಹೊರಬರುತ್ತಲೇ ಇವೆ.

ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಜಗದೀಶ್ ಶೆಟ್ಟರ್ ನ್ನು ಈ ಬಾರಿ ಚುನಾವಣೆಯಲ್ಲಿ ಸೋಲಿಸಲು ಪಣತೊಟ್ಟಿರುವುದಾಗಿ ಹೇಳಿದ್ದಾರೆ. 

ಇಂದು ಅಥಣಿಯಲ್ಲಿ ಮಾತನಾಡಿರುವ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಬೆನ್ನಿಗೆ ಚೂರಿ ಹಾಕಿದ್ದಾರೆ. ಅವರನ್ನು ಸೋಲಿಸುವ ಜವಾಬ್ದಾರಿ ನನ್ನದು ಎಂದಿದ್ದಾರೆ. ಬಿಜೆಪಿ ಶೆಟ್ಟರ್ ಅವರಿಗೆ ಎಲ್ಲಾ ಸ್ಥಾನಮಾನಗಳನ್ನು ನೀಡಿದರೂ ಪಕ್ಷ ಬಿಟ್ಟು ಹೋಗುವ ಅನಿವಾರ್ಯತೆ ಅವರಿಗೇನಿತ್ತು ಎಂದು ಪ್ರಶ್ನಿಸಿದ್ದಾರೆ. 

ಇಂದು ಇಷ್ಟೊಂದು ಸಂಖ್ಯೆಯಲ್ಲಿ ಜನ ಸೇರಿದ್ದು ನೋಡಿದರೆ ಈ ಬಾರಿ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಸೋಲುವುದು ಖಚಿತ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ, ರಾಜ್ಯದಲ್ಲಿ ಬಿಜೆಪಿ 130 ಕ್ಕೂ ಹೆಚ್ಚು ಸೀಟು ಪಡೆದು ಸರ್ಕಾರ ರಚಿಸುವುದು ಅಷ್ಟೇ ಸತ್ಯ. 25 ರಿಂದ 30 ಸಾವಿರ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಗೆಲ್ಲಲಿದ್ದಾರೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ವಿಧಾನ ಪರಿಷತ್ ಅವಧಿ 5 ವರ್ಷ 2 ತಿಂಗಳು ಇದ್ದರೂ ಸಹ ಲಕ್ಷ್ಮಣ ಸವದಿ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಎಲ್ಲಾ ಅಧಿಕಾರ ಅನುಭವಿಸಿಯೂ ಶೆಟ್ಟರ್ ಬಿಜೆಪಿ ತೊರೆದಿದ್ದಾರೆ. ಇಲ್ಲಿ ಶೆಟ್ಟರ್ ಅವರನ್ನು ಸೋಲಿಸುವ ಜವಬ್ದಾರಿ ನನ್ನದು, ಲಕ್ಷ್ಮಣ ಸವದಿ  ಅವರನ್ನು ಸೋಲಿಸುವ ಜವಾಬ್ದಾರಿ ನಿಮ್ಮದು ಎಂದು ಜನರಿಗೆ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT