ಎಂ. ಶ್ರೀನಿವಾಸ್ 
ರಾಜಕೀಯ

ನಿಷ್ಠೆ ಬದಲಿಸಿದ ದಳಪತಿಗಳು: ಮಂಡ್ಯ ಜೆಡಿಎಸ್ ಕಾರ್ಯಕರ್ತರ ಯೂಟರ್ನ್; ಸ್ವಾಭಿಮಾನಿ ಪಡೆಗೆ ನೀಡಿದ್ದ ಬೆಂಬಲ ವಾಪಸ್!

ಜೆಡಿಎಸ್‌ನಲ್ಲಿ ಟಿಕೆಟ್‌ ಗೊಂದಲದಿಂದ ಬಂಡಾಯದ ಬಿಸಿ ತಟ್ಟಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ಪಕ್ಷದ ವಿರುದ್ಧವೇ ತೊಡೆ ತಟ್ಟಿದ್ದಾರೆ.  

ಮೈಸೂರು:  ಜೆಡಿಎಸ್‌ನಲ್ಲಿ ಟಿಕೆಟ್‌ ಗೊಂದಲದಿಂದ ಬಂಡಾಯದ ಬಿಸಿ ತಟ್ಟಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ಪಕ್ಷದ ವಿರುದ್ಧವೇ ತೊಡೆ ತಟ್ಟಿದ್ದಾರೆ.  

ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೈ ತಪ್ಪಿದ ಶ್ರೀನಿವಾಸ್‌ಗೆ ಸೋಮವಾರದವರೆಗೆ ಜೆಡಿಎಸ್ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು. ಹೀಗಾಗಿ ಮಾಜಿ ಶಾಸಕ ಎಂ ಶ್ರಿನೀವಾಸ್ ನೇತೃತ್ವದಲ್ಲಿ ‘ಸ್ವಾಭಿಮಾನಿ ಪಡೆ’ಯಿಂದ ಕೆ.ವಿ.ಶಂಕರೇಗೌಡರ ಮೊಮ್ಮಗ ಕೆ.ಎಸ್.ವಿಜಾನಂದ್ ಅವರನ್ನು ಕಣಕ್ಕಿಳಿಸಲಾಗಿತ್ತು

ಜೆಡಿಎಸ್ ಪಕ್ಷದ ಪರವಾಗಿ ರಾಮಚಂದ್ರ ಅವರನ್ನು ಪಕ್ಷದಿಂದ ಕಣಕ್ಕಿಳಿಸುವ ಹಠಾತ್ ನಿರ್ಧಾರದಿಂದ ಅಸಮಾಧಾನಗೊಂಡಿದ್ದ ಜೆಡಿಎಸ್ ಕಾರ್ಯಕರ್ತರು ಶ್ರೀನಿವಾಸ್ ಅವರಿಗೆ ಬೆಂಬಲ ಸೂಚಿಸಿದರು. ಆದರೆ, ಕೊನೆ ಗಳಿಗೆಯಲ್ಲಿ ಜೆಡಿಎಸ್ ಮುಖಂಡರ ಜತೆಗಿನ ಮಾತುಕತೆ ನಂತರ, ಶ್ರೀನಿವಾಸ್‌ಗೆ ಬೆಂಬಲ ನೀಡಿದ ಗುಂಪು ಯೂ ಟರ್ನ್‌ ಪಡೆದು ರಾಮಚಂದ್ರ ಅವರಿಗೆ ಬೆಂಬಲ ಸೂಚಿಸಿದೆ.

ಶ್ರೀನಿವಾಸ್ ಜತೆ ಗುರುತಿಸಿಕೊಂಡಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಎಚ್‌ಎಸ್‌ ಮಂಜು, ಎಸ್‌ಪಿ ಗಿರೀಶ್‌ ಸೇರಿದಂತೆ ಜೆಡಿಎಸ್‌ ಮುಖಂಡರು ಪಕ್ಷದ ಅಭ್ಯರ್ಥಿ ರಾಮಚಂದ್ರ ಪರ ಪ್ರಚಾರ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ