ದೇವೇಗೌಡ 
ರಾಜಕೀಯ

ಮುಂದಿನ 11 ದಿನ 42 ಸ್ಥಳಗಳಲ್ಲಿ ಜೆಡಿಎಸ್ ಪರ ದೇವೇಗೌಡ ಪ್ರಚಾರ

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇಳಿ ವಯಸ್ಸಿನಲ್ಲೂ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದು, ನಾಳೆಯಿಂದ ಮುಂದಿನ 11 ದಿನಗಳಲ್ಲಿ 42 ಸ್ಥಳಗಳಲ್ಲಿ ತಮ್ಮ ಪಕ್ಷದ ಪರ ಪ್ರಚಾರ ನಡೆಸುವುದಾಗಿ ಗುರುವಾರ

ಬೆಂಗಳೂರು: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇಳಿ ವಯಸ್ಸಿನಲ್ಲೂ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದು, ನಾಳೆಯಿಂದ ಮುಂದಿನ 11 ದಿನಗಳಲ್ಲಿ 42 ಸ್ಥಳಗಳಲ್ಲಿ ತಮ್ಮ ಪಕ್ಷದ ಪರ ಪ್ರಚಾರ ನಡೆಸುವುದಾಗಿ ಗುರುವಾರ ಹೇಳಿದ್ದಾರೆ.
         
ತಮ್ಮ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಾರಕ್ಕೊಮ್ಮೆ ವಿಶ್ರಾಂತಿ ತೆಗೆದುಕೊಳ್ಳುವುದಾಗಿ 89 ವರ್ಷದ ಮಾಜಿ ಪ್ರಧಾನಿ ತಿಳಿಸಿದ್ದಾರೆ.

ನಾಳೆಯಿಂದ ಮೇ 8ರವರೆಗೆ 42 ಕಡೆ ಪ್ರಚಾರ ನಡೆಸುತ್ತೇನೆ. ಇದೊಂದು ತಾತ್ಕಾಲಿಕ ಕಾರ್ಯಕ್ರಮ. ವಾರಕ್ಕೊಮ್ಮೆ ಇಂಜೆಕ್ಷನ್ ತೆಗೆದುಕೊಳ್ಳಬೇಕಾಗಿರುವುದರಿಂದ ಆರೋಗ್ಯದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಾರಕ್ಕೊಮ್ಮೆ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಎಂದು ದೇವೇಗೌಡ ಅವರು ಹೇಳಿದ್ದಾರೆ. ದೇವೇಗೌಡ ಅವರು ಮೇ 18ಕ್ಕೆ 90ನೇ ವರ್ಷಕ್ಕೆ ಕಾಲಿಡಲಿದ್ದಾರೆ.

ಇದನ್ನು ಓದಿ: ಮೋದಿ ಪ್ರಚಾರ ಅಸೆಂಬ್ಲಿ ಚುನಾವಣೆ ಮೇಲೆ ಹೆಚ್ಚು ಪರಿಣಾಮ ಬೀರದು: ಹೆಚ್ ಡಿ ದೇವೇಗೌಡ (ಸಂದರ್ಶನ)
          
ಪಕ್ಷವು 211 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಅದರಲ್ಲಿ ಇಬ್ಬರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಮತ್ತು ಇಬ್ಬರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಹೀಗಾಗಿ ಜೆಡಿಎಸ್‌ನ 207 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಮಾಜಿ ಪ್ರಧಾನಿ ತಿಳಿಸಿದ್ದಾರೆ.
        
ಇದರ ಹೊರತಾಗಿ, ಜೆಡಿ-ಎಸ್ ಮೂರು ಸಿಪಿಐ-ಎಂ ಮತ್ತು ಮೂರು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಗಳಿಗೆ ತನ್ನ ಬೆಂಬಲವನ್ನು ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ