ಮಾಯಾವತಿ 
ರಾಜಕೀಯ

ಗಾಂಧಿನಗರ ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಮತ್ತು 'ಅಖಂಡ' ಪರ ಮಾಯಾವತಿ ಪ್ರಚಾರ!

ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಗಾಂಧಿ ನಗರದಿಂದ ಹಾಗೂ ಕಾಂಗ್ರೆಸ್ ಬಂಡಾಯ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ಪುಲಕೇಶಿನಗರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.

ಬೆಂಗಳೂರು: ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಗಾಂಧಿ ನಗರದಿಂದ ಹಾಗೂ ಕಾಂಗ್ರೆಸ್ ಬಂಡಾಯ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ಪುಲಕೇಶಿನಗರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಈ ಇಬ್ಬರ ಪರ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಮೇ 5ರಂದು ಬೆಂಗಳೂರಿನಲ್ಲಿ ಪ್ರಚಾರ ಮಾಡಲಿದ್ದಾರೆ.

ಈಗಾಗಲೇ ನನಗೆ ಮುಸ್ಲಿಂ, ದಲಿತ ಮತ್ತು ಕ್ರಿಶ್ಚಿಯನ್ ಬೆಂಬಲವಿದೆ , ಮಾಯಾವತಿ ಪ್ರಚಾರದಿಂದ ಪುಲಕೇಶಿನಗರದಿಂದ ಹೆಚ್ಚಿನ ಮತಗಳನ್ನು ಗಳಿಸಲು ಸಹಾಯ ಮಾಡುತ್ತದೆ ಎಂದು ಅಖಂಡ ಶ್ರೀನಿವಾಸ್ ಮೂರ್ತಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಗೆ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆಯ 130 ಸ್ಥಾನಗಳಲ್ಲಿ ಬಿಎಸ್‌ಪಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಮೇ 5 ರಂದು ಅರಮನೆ ಮೈದಾನದಲ್ಲಿ ಪಕ್ಷದ ವರಿಷ್ಠರು ಸಮಾವೇಶ ನಡೆಸಲಿದ್ದಾರೆ ಎಂದು ಬಿಎಸ್‌ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ತಿಳಿಸಿದ್ದಾರೆ. ಕೋಮುವಾದಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಬಿಎಸ್‌ಪಿ ಅಗತ್ಯವಾಗಿದೆ ಎಂದಿದ್ದಾರೆ.

ಮಾಯಾವತಿ ಅವರು ಅರಮನೆ ಮೈದಾನದಿಂದ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಹೇಳಿದ್ದಾರೆ. ಗಾಂಧಿನಗರ ವಿಧಾನಸಭೆಯಿಂದ ಸ್ವತಂತ್ರ ಅಭ್ಯರ್ಥಿಯಾಗಿರುವ ಎನ್ ಕೃಷ್ಣಯ್ಯ ಶೆಟ್ಟಿ ಅವರಿಗೆ ಬಿಎಸ್ ಪಿ ಬೆಂಬಲಿಸುತ್ತದೆ, ಹಾಗೆಯೇ ತನ್ವೀರ್ ಸೇಠ್ ವಿರುದ್ಧ ನರಸಿಂಹರಾಜ ವಿಧಾನಸಭೆಯ ಎಸ್‌ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ಅವರನ್ನು ಬೆಂಬಲಿಸಲಾಗುತ್ತದೆ" ಎಂದು ಕೃಷ್ಣಮೂರ್ತಿ ಹೇಳಿದರು.

ಬಡವರು, ದೀನದಲಿತರು, ಎಸ್‌ಸಿ/ಎಸ್‌ಸಿ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಲು ಕೆಲವು ಶಾಸಕರನ್ನು ಕಳುಹಿಸಲು  ಬಿಎಸ್‌ಪಿ ಶ್ರಮಿಸುತ್ತಿದೆ. ಅಖಂಡ ಶ್ರೀನಿವಾಸ ಮೂರ್ತಿ ಬಿಎಸ್‌ಪಿಗೆ ಸೇರ್ಪಡೆಯಾಗಿರುವುದು ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಿದೆ ಎಂದು ಬಿಎಸ್‌ಪಿ ಮುಖಂಡರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT