ಯತ್ನಾಳ್, ಸೋನಿಯಾ ಗಾಂಧಿ 
ರಾಜಕೀಯ

ಸೋನಿಯಾ 'ವಿಷಕನ್ಯೆ': ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ; ಯತ್ನಾಳ್ ಉಚ್ಚಾಟನೆಗೆ ಆಗ್ರಹ

ಸೋನಿಯಾ ಗಾಂಧಿ ಅವರನ್ನು 'ವಿಷಕನ್ಯೆ' ಎಂದು ಕರೆದಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸುವಂತೆ ಕಾಂಗ್ರೆಸ್ ಬಿಜೆಪಿಯನ್ನು ಒತ್ತಾಯಿಸಿದೆ.

ಬೆಂಗಳೂರು: ಸೋನಿಯಾ ಗಾಂಧಿ ಅವರನ್ನು 'ವಿಷಕನ್ಯೆ' ಎಂದು ಕರೆದಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸುವಂತೆ ಕಾಂಗ್ರೆಸ್ ಬಿಜೆಪಿಯನ್ನು ಒತ್ತಾಯಿಸಿದೆ.

ರಾಜ್ಯದಲ್ಲಿನ ಬಿಜೆಪಿ ನಾಯಕರುತಮ್ಮ ಮಾನಸಿಕ ಮತ್ತು ರಾಜಕೀಯ ಸಮತೋಲನವನ್ನು ಕಳೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿದರ್ಶನದಲ್ಲಿ ಯತ್ನಾಳ್ ಅವರು  ಗಾಂಧಿ ವಿರುದ್ಧದ ಅತ್ಯಂತ ಕೆಟ್ಟ ರೀತಿಯ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಹತಾಸೆಯಿಂದ ಬಿಜೆಪಿ ನಾಯಕರು ಕೊಳಕು ಮನಸ್ಥಿತಿಯಿಂದ ಕಾಂಗ್ರೆಸ್ ನಾಯಕರನ್ನು ಅಪಮಾನಿಸುತ್ತಿದ್ದಾರೆ. ಅವರು ರಾಜಕೀಯ ಸಮತೋಲನ ಮತ್ತು ಸಭ್ಯತೆಯನ್ನು ಕಳೆದುಕೊಂಡಿದ್ದು, ಅತ್ಯಂಕ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದ್ದಾರೆ.

ಬಸನಗೌಡ ಯತ್ನಾಳ್ ಹೇಳಿಕೆ ದೇಶದ ಸಂಸ್ಕೃತಿಗೆ ಧಕ್ಕೆ ತರುವಂತಹದ್ದು, ಇದು ಸೋನಿಯಾಗಾಂಧಿ ಅವರೊಬ್ಬರ ಪ್ರಶ್ನೆಯಲ್ಲ, ಇಡೀ ಸ್ತ್ರೀ ಕುಲದ ಘನತೆಯ ಪ್ರಶ್ನೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ವಿಷಪೂರಿತ ಹಾವಿಗೆ ಹೋಲಿಸಿದ ನಂತರ ಬಿಜಾಪುರ ಶಾಸಕ ಮತ್ತು ಮಾಜಿ ಸಚಿವ ಯತ್ನಾಳ್ ಅವರು ಚುನಾವಣಾ ಪ್ರಚಾರದಲ್ಲಿ  ಸೋನಿಯಾ ಗಾಂಧಿ ವಿರುದ್ಧ ವಿಷಕನ್ಯೆ ಟೀಕೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಿಂದಿನದನ್ನು ಮರೆತುಬಿಡಿ, ಭವಿಷ್ಯದತ್ತ ಗಮನಹರಿಸಿ, ವಿಷನ್ 2047ಕ್ಕೆ ಒತ್ತು ನೀಡಿ': ಸಚಿವರಿಗೆ ಪ್ರಧಾನಿ ಮೋದಿ ಸಲಹೆ

ಅಮೆರಿಕ ಲೆಕ್ಕಾಚಾರವೇ ತಲೆಕೆಳಗೆ: Iran ನಿಂದ ವೇಗವಾಗಿ ಶಸ್ತ್ರಾಸ್ತ್ರ ನೆಲೆಗಳ ಪುನರ್‌ನಿರ್ಮಾಣ, ಈಗಾಗಲೇ ಡ್ರೋನ್ ಉತ್ಪಾದನೆ ಆರಂಭ: ವರದಿ

'ಗೃಹಲಕ್ಷ್ಮಿ ಹಣ ಕೊಡಿಸಿ'; ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆಯರು, ಸರ್ಕಾರಕ್ಕೆ ನೋಟಿಸ್ ಜಾರಿ

IPL 2026: 'ಹಾರ್ದಿಕ್ ಪಾಂಡ್ಯ ತಂಡದ ವಾತಾವರಣ ಹಾಳು ಮಾಡಿದರು, ರೋಹಿತ್ ಶರ್ಮಾರ ಗೌರವ ಮರಳಿಸಿ': ಮುಂಬೈ ಇಂಡಿಯನ್ಸ್ ಗೆ ಸಲಹೆ

Ghar wapasi: ಪಾಸ್ಟರ್ ಸಹಿತ ಹಿಂದೂ ಧರ್ಮಕ್ಕೆ ಮರಳಿದ 200 ಮಂದಿ

SCROLL FOR NEXT