ಡಾ ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಗಲಾಟೆ ಆರಂಭಿಸಿದ್ದೇ ಬಿಜೆಪಿ: ಸಿದ್ದರಾಮಯ್ಯ; ಕಾರು-ಬೈಕ್ ಡಿಕ್ಕಿಯಿಂದ ಆದ ಜಗಳಕ್ಕೆ ರಾಜಕೀಯ ಬಣ್ಣ ಎಂದ ಯತೀಂದ್ರ

ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಗಲಾಟೆ ಶುರುಮಾಡಿದ್ದೇ ಬಿಜೆಪಿಯವರು, ಬಿಜೆಪಿ ಪಾಳಯದಲ್ಲಿ ನಮ್ಮ ಪರ ಯಾರೋ ಘೋಷಣೆ ಕೂಗಿದರು. ಅದಕ್ಕೆ ಬಿಜೆಪಿಯವರು ಗಲಾಟೆ ಶುರುಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ರಾಯಚೂರಿನಲ್ಲಿಂದು ಪ್ರತಿಕ್ರಿಯಿಸಿದ್ದಾರೆ.

ರಾಯಚೂರು/ಮೈಸೂರು: ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಗಲಾಟೆ ಶುರುಮಾಡಿದ್ದೇ ಬಿಜೆಪಿಯವರು, ಬಿಜೆಪಿ ಪಾಳಯದಲ್ಲಿ ನಮ್ಮ ಪರ ಯಾರೋ ಘೋಷಣೆ ಕೂಗಿದರು. ಅದಕ್ಕೆ ಬಿಜೆಪಿಯವರು ಗಲಾಟೆ ಶುರುಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ರಾಯಚೂರಿನಲ್ಲಿಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆಯಿದೆ, ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಪರ ಜನರ ಒಲವಿದೆ ಇದರಿಂದ ಹತಾಶೆಯಿಂದ ಬಿಜೆಪಿಯವರು ಗಲಾಟೆ ಮಾಡುತ್ತಿದ್ದಾರೆ ಎಂದರು.

ಸೋಮಣ್ಣನವರು ಗಲಾಟೆ ಬಗ್ಗೆ ದೂರು ನೀಡುತ್ತಾರೆಯೇ ನೀಡಲಿ, ನಾವೂ ದೂರು ಕೊಡುತ್ತೇವೆ ಎಂದು ಸಿದ್ದರಾಮಯ್ಯ ಗರಂ ಆಗಿ ಹೇಳಿದರು.

ಇನ್ನು ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮನಹುಂಡಿಯಲ್ಲಿ ಕಾರು-ಬೈಕ್ ಡಿಕ್ಕಿಯಿಂದ ಜಗಳ ನಡೆದಿದೆ. ಬಿಜೆಪಿಯವರು ಇದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ ಎಂದು ಆರೋಪಿಸಿದರು. 

ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಸಲು ನಿಸ್ಸೀಮರು. ಎಷ್ಟೇ ಪ್ರಚೋದನೆ ಮಾಡಿದರು ಅವರ ಪ್ರಚೋದನೆಗೆ ಕಾಂಗ್ರೆಸ್ ಕಾರ್ಯಕರ್ತರು ಒಳಗಾಗಬಾರದು. ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಈ ರೀತಿ ಕಾರ್ಯತಂತ್ರ ಮಾಡುತ್ತಿದೆ ಎಂದು ಹರಿಹಾಯ್ದರು.

ಬಿಜೆಪಿ ಹಸಿ ಸುಳ್ಳು ಹೇಳುತ್ತಾ ದ್ವೇಷ ಹುಟ್ಟುಹಾಕಿ ತನ್ನ ಬೇಳೆ ಬೇಯಿಸಿಕೊಳ್ಳುವ ತಂತ್ರ ಮಾಡುತ್ತಿದೆ. ಗಲಾಟೆ ನಡೆದ ವೇಳೆ ಸಿದ್ದರಾಮಯ್ಯ ಕುಟುಂಬದವರು ಯಾರೂ ಅಲ್ಲಿ ಇರಲಿಲ್ಲ. ಆದರೂ ದುರುದ್ದೇಶದಿಂದ ನಮ್ಮ ಕುಟುಂಬದ ಸದಸ್ಯರ ಮೇಲೆ ದೂರು ನೀಡಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT