ಸಿದ್ದರಾಮಯ್ಯ 
ರಾಜಕೀಯ

'ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ: ಮೋದಿ ಜೊತೆ ಓಟದ ಸ್ಪರ್ಧೆಗೆ ನಾನು ಸಿದ್ಧ'

ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್  ಮಾಡಿರುವ ಸಿದ್ದರಾಮಯ್ಯ,  ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿದಿಲ್ಲ ಎಂದಿರುವ ಅವರು ಮೋದಿಗೆ ಈ ಚಾಲೆಂಜ್ ಹಾಕಿದ್ದಾರೆ.

ಪ್ರಧಾನಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್ ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ ಎಂದು ಪ್ರಶ್ನಿಸಿದ್ದಾರೆ.

ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ನರೇಂದ್ರ ಮೋದಿಯವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT