ಬಸವರಾಜ ಬೊಮ್ಮಾಯಿ 
ರಾಜಕೀಯ

ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ: ಸಚಿವ ರಾಮಲಿಂಗಾ ರೆಡ್ಡಿಗೆ ಬೊಮ್ಮಾಯಿ ತಿರುಗೇಟು

ರಾಜ್ಯದ ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ. ಸಾರಿಗೆ ಇಲಾಖೆಯ ಆದೇಶ ನೋಡಿಯೇ ರಾಜ್ಯದ ಜನತೆಗೆ ಸತ್ಯ ಹೇಳುವ ಕೆಲಸ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ರಾಜ್ಯದ ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ. ಸಾರಿಗೆ ಇಲಾಖೆಯ ಆದೇಶ ನೋಡಿಯೇ ರಾಜ್ಯದ ಜನತೆಗೆ ಸತ್ಯ ಹೇಳುವ ಕೆಲಸ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರೇ ಶಕ್ತಿ ಯೋಜನೆ ಅಡಿ ರಾಜ್ಯದಲ್ಲಿ ಮಹಿಳೆಯರು ಸಾರಿಗೆ ನಿಗಮದ ಬಸ್ ಗಳಲ್ಲಿ ಜೂನ್ ತಿಂಗಳಲ್ಲಿ 20 ದಿನ ಉಚಿತ ಪ್ರಯಾಣ ಮಾಡಿರುವುದರಿಂದ ನಾಲ್ಕು ಸಾರಿಗೆ ನಿಗಮಗಳಿಗೆ 250 ಕೋಟಿ ರೂ. ವೆಚ್ಚವಾಗಿದ್ದು, ಪ್ರಯಾಣ ವೆಚ್ಚದ ಮರು ಪಾವತಿ ಮಾಡಲು ನಾಲ್ಕೂ ನಿಗಮಗಳಿಗೆ ಆಗಸ್ಟ್ 1 ರಂದು 125 ಕೋಟಿ ಬಿಡುಗಡೆ ಮಾಡಿ ನಿಮ್ಮದೇ ಇಲಾಖೆ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ.

ಸಾರಿಗೆ ನಿಗಮಗಳ ಬೇಡಿಕೆಗೂ ಸರ್ಕಾರ ಬಿಡುಗಡೆ ಮಾಡಿರುವ ಅನುದಾನಕ್ಕೂ ಅರ್ಧದಷ್ಟು ಕಡಿಮೆ ಇದ್ದು, ಹೀಗಿರುವಾಗ ಮೊದಲೇ ನಷ್ಟದಲ್ಲಿ ನಡೆಯುತ್ತಿರುವ ಸಾರಿಗೆ ನಿಗಮಗಳಿಗೆ ಸಿಬ್ಬಂದಿ ಸಂಬಳ, ಬಸ್ ಗಳ ನಿರ್ವಹಣೆ, ಡಿಸೇಲ್ ಗೆ ಹಣದ ಕೊರತೆಯಾಗುವುದು ವಾಸ್ತವಿಕ ಸತ್ಯ. ಆ ಸತ್ಯವನ್ನೇ ನಾನು ರಾಜ್ಯದ ಜನತೆಗೆ ತಿಳಿಸಿದ್ದೇನೆ ಎಂದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT