ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಪೊಲೀಸ್ ವರ್ಗಾವಣೆ ಪ್ರಹಸನ: ಸಿಎಂ, ಗೃಹಸಚಿವ ರಹಸ್ಯ ಸಭೆ; 'ಪ್ಲಮ್ ಪೋಸ್ಟಿಂಗ್' ಪಡೆಯಲು ಯತೀಂದ್ರ ನೆರವು!

ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ತಮ್ಮ ಶಿಫಾರಸಿಗೆ ಸರ್ಕಾರ ಸ್ಪಂದಿಸಿಲ್ಲ ಎಂಬ ಅಸಮಾಧಾನ ಹಲವು ಶಾಸಕರಲ್ಲಿ ಇತ್ತು. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು.

ಬೆಂಗಳೂರು: ಪೊಲೀಸ್‌ ಇನ್‌ಸ್ಪೆಕ್ಟರ್‌ ಗಳು ವರ್ಗಾವಣೆ ಆದೇಶ ಹೊರಬೀಳುತ್ತಿದ್ದಂತೆಯೇ ಕೆಲವರು ನಿಯುಕ್ತಿಗೊಂಡ ಸ್ಥಳದಲ್ಲಿ ಅಧಿಕಾರ ಸ್ವೀಕರಿಸುವ ತರಾತುರಿಯಲ್ಲಿದ್ದರು. ಆದರೆ, ಅಧಿಕಾರ ಸ್ವೀಕರಿಸದಂತೆ ತಡೆಯೊಡ್ಡಿರುವುದರಿಂದ ಹಲವು ಅಧಿಕಾರಿಗಳು ಪೇಚಿಗೆ ಸಿಲುಕಿದ್ದಾರೆ.

ಇನ್ಸ್ ಪೆಕ್ಟರ್ ಗಳಾದ ದೀಪಕ್ ಎಲ್ (ಹೆಣ್ಣೂರು ಪೊಲೀಸ್ ಠಾಣೆ), ಮೋಹನ್ ಎನ್ ಹೆದ್ದಣ್ಣನವರ್ (ಕೆಜಿ ಹಳ್ಳಿ ಸಂಚಾರ), ಸುನೀಲ್ ಎಚ್ ಬಿ (ಕೆಜಿ ಹಳ್ಳಿ), ಶಿವಸ್ವಾಮಿ ಸಿಬಿ (ಬಸವೇಶ್ವರನಗರ), ರವಿಕುಮಾರ್ ಎಚ್ ಕೆ (ಪುಟ್ಟೇನಹಳ್ಳಿ), ಪ್ರವೀಣ್ ಬಾಬು ಜಿ (ಮಹದೇವಪುರ), ಮಂಜುನಾಥ್ ಬಿ ( ಸಿಇಎನ್, ಬಳ್ಳಾರಿ ಜಿಲ್ಲೆ) ಮತ್ತು ಸಚಿನ್ ಕುಮಾರ್ (ಚಿಕ್ಕಮಗಳೂರು ಗ್ರಾಮಾಂತರ) ಅವರ ವರ್ಗಾವಣೆಯನ್ನು ತಡೆ ಹಿಡಿಯಲಾಗಿದೆ.

ಕೆಲವು ಇನ್ಸ್‌ಪೆಕ್ಟರ್‌ಗಳು ಅಧಿಕಾರ ವಹಿಸಿಕೊಂಡಿದ್ದು, ಈಗ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಗೆ ತೆರಳಲು ಸ್ವತಂತ್ರರಾಗಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮೂಲವೊಂದು ತಿಳಿಸಿದೆ. ಸದ್ಯ ನನಗೆ ಮಾಡಿರುವ ಪೊಸ್ಟಿಂಗ್ ನಿಂದ ನಾನು ಸಂತೋಷವಾಗಿದ್ದೇನೆ, ಆದರೆ ಹೊಸ ಪಟ್ಟಿಯು ಪ್ರಮುಖ ಬದಲಾವಣೆಗಳೊಂದಿಗೆ ಬಂದರೆ, ಅದು ಸರ್ಕಾರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಇನ್‌ಸ್ಪೆಕ್ಟರ್ ಒಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ತಮ್ಮ ಶಿಫಾರಸಿಗೆ ಸರ್ಕಾರ ಸ್ಪಂದಿಸಿಲ್ಲ ಎಂಬ ಅಸಮಾಧಾನ ಹಲವು ಶಾಸಕರಲ್ಲಿ ಇತ್ತು. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು. ಗೃಹ ಸಚಿವ ಜಿ. ಪರಮೇಶ್ವರ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರೊಂದಿಗೆ ಭಾನುವಾರ(ಜುಲೈ 30) ರಹಸ್ಯ ಸಭೆ ನಡಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ಕುರಿತು ಚರ್ಚಿಸಿದ್ದರು.

ಜುಲೈ 31ರಂದು ನಡೆದ ಡಿವೈಎಸ್ಪಿ ಮತ್ತು ಎಸಿಪಿಗಳ ವರ್ಗಾವಣೆ ಜಾಣ್ಮೆಯಿಂದ ನಡೆದಿದ್ದರಿಂದ ಯಾವುದೇ ಸಮಸ್ಯೆ ಸೃಷ್ಟಿಯಾಗಲಿಲ್ಲ. ಆದರೆ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಸಮಸ್ಯೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ವಿಭಾಗಗಳು ಮತ್ತು ಸ್ಟೇಷನ್ ಗಳಿಗೆ ಕೆಲವು ಪೋಸ್ಟಿಂಗ್‌ ಮಾಡಲಾಯಿತು, ಇವುಗಳನ್ನು "ಪ್ಲಮ್" ಪೋಸ್ಟಿಂಗ್‌ಗಳೆಂದು ಪರಿಗಣಿಸಲಾಗುತ್ತದೆ. ಕೆಲವು ಅಧಿಕಾರಿಗಳು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ‘ಪ್ಲಮ್’ ಹುದ್ದೆ ಪಡೆಯಲು ನೆರವು ಕೋರಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!