ಬಿಜೆಪಿ ಟ್ವೀಟ್ 
ರಾಜಕೀಯ

'ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ನವರೇ ಕೂಡಲೇ ಕೃಷಿ ಸಚಿವರ ರಾಜಿನಾಮೆ ಪಡೆಯಿರಿ'

ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ನೀವು ಈ ಕೂಡಲೇ ಭ್ರಷ್ಟ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಅಥವಾ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು  ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ  ಬಿಜೆಪಿ, ಈ ಹಿಂದೆ ಶಾಸಕರ ಪತ್ರ ನಕಲು ಎಂದಿದ್ದ ನೀವು, ಈಗ ನಿಮ್ಮ ಸಚಿವರ ಕರ್ಮಕಾಂಡ ಬಯಲು ಮಾಡುವ ಪತ್ರವೂ ನಕಲು ಎನ್ನುತ್ತಿರೋ ಹೇಗೆ..? ಎಂದು ಬಿಜೆಪಿ ಪ್ರಶ್ನಿಸಿದೆ.

ಕಪೋಲಕಲ್ಪಿತ ಸುಳ್ಳು ಆರೋಪಗಳ ಪುಂಗಿ ಊದಿ ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಪಕ್ಷ  ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದೆ. ಸಚಿವರಾದ ಮೊದಲ ದಿನದಿಂದಲೇ ವಸೂಲಿ, ವರ್ಗಾವಣೆ, ದ್ವೇಷದ ರಾಜಕಾರಣಕ್ಕೆ ಮುನ್ನುಡಿ ಬರೆದ ಚೆಲುವರಾಯಸ್ವಾಮಿ, 6 ರಿಂದ 8 ಲಕ್ಷ ರೂಪಾಯಿ ಕಮಿಷನ್‌ಗಾಗಿ ತನ್ನ ಇಲಾಖೆಯ ಮೇಲಾಧಿಕಾರಿಗಳನ್ನು ಕಲೆಕ್ಷನ್ ಏಜೆಂಟ್‌ಗಳನ್ನಾಗಿ ಮಾಡಿಕೊಂಡಿದ್ದಾರಂತೆ ನೋಡಿ ಎಂದು ಬಿಜೆಪಿ ಕಾಲೆಳೆದಿದೆ. ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ ಒಂದೇ ಗ್ಯಾರಂಟಿ. ಮಾನ್ಯ ಸಿದ್ದರಾಮಯ್ಯನವರೇ, ಇದರಲ್ಲಿ ಯಾರ್ಯಾರ ಪಾಲೆಷ್ಟು..? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT