ಬಿಜೆಪಿ ಟ್ವೀಟ್ 
ರಾಜಕೀಯ

'ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ನವರೇ ಕೂಡಲೇ ಕೃಷಿ ಸಚಿವರ ರಾಜಿನಾಮೆ ಪಡೆಯಿರಿ'

ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ನೀವು ಈ ಕೂಡಲೇ ಭ್ರಷ್ಟ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಅಥವಾ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು  ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ  ಬಿಜೆಪಿ, ಈ ಹಿಂದೆ ಶಾಸಕರ ಪತ್ರ ನಕಲು ಎಂದಿದ್ದ ನೀವು, ಈಗ ನಿಮ್ಮ ಸಚಿವರ ಕರ್ಮಕಾಂಡ ಬಯಲು ಮಾಡುವ ಪತ್ರವೂ ನಕಲು ಎನ್ನುತ್ತಿರೋ ಹೇಗೆ..? ಎಂದು ಬಿಜೆಪಿ ಪ್ರಶ್ನಿಸಿದೆ.

ಕಪೋಲಕಲ್ಪಿತ ಸುಳ್ಳು ಆರೋಪಗಳ ಪುಂಗಿ ಊದಿ ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಪಕ್ಷ  ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದೆ. ಸಚಿವರಾದ ಮೊದಲ ದಿನದಿಂದಲೇ ವಸೂಲಿ, ವರ್ಗಾವಣೆ, ದ್ವೇಷದ ರಾಜಕಾರಣಕ್ಕೆ ಮುನ್ನುಡಿ ಬರೆದ ಚೆಲುವರಾಯಸ್ವಾಮಿ, 6 ರಿಂದ 8 ಲಕ್ಷ ರೂಪಾಯಿ ಕಮಿಷನ್‌ಗಾಗಿ ತನ್ನ ಇಲಾಖೆಯ ಮೇಲಾಧಿಕಾರಿಗಳನ್ನು ಕಲೆಕ್ಷನ್ ಏಜೆಂಟ್‌ಗಳನ್ನಾಗಿ ಮಾಡಿಕೊಂಡಿದ್ದಾರಂತೆ ನೋಡಿ ಎಂದು ಬಿಜೆಪಿ ಕಾಲೆಳೆದಿದೆ. ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ ಒಂದೇ ಗ್ಯಾರಂಟಿ. ಮಾನ್ಯ ಸಿದ್ದರಾಮಯ್ಯನವರೇ, ಇದರಲ್ಲಿ ಯಾರ್ಯಾರ ಪಾಲೆಷ್ಟು..? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel