ಬಿಜೆಪಿ ಟ್ವೀಟ್ 
ರಾಜಕೀಯ

'ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ನವರೇ ಕೂಡಲೇ ಕೃಷಿ ಸಚಿವರ ರಾಜಿನಾಮೆ ಪಡೆಯಿರಿ'

ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ನೀವು ಈ ಕೂಡಲೇ ಭ್ರಷ್ಟ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಅಥವಾ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು  ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ  ಬಿಜೆಪಿ, ಈ ಹಿಂದೆ ಶಾಸಕರ ಪತ್ರ ನಕಲು ಎಂದಿದ್ದ ನೀವು, ಈಗ ನಿಮ್ಮ ಸಚಿವರ ಕರ್ಮಕಾಂಡ ಬಯಲು ಮಾಡುವ ಪತ್ರವೂ ನಕಲು ಎನ್ನುತ್ತಿರೋ ಹೇಗೆ..? ಎಂದು ಬಿಜೆಪಿ ಪ್ರಶ್ನಿಸಿದೆ.

ಕಪೋಲಕಲ್ಪಿತ ಸುಳ್ಳು ಆರೋಪಗಳ ಪುಂಗಿ ಊದಿ ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಪಕ್ಷ  ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದೆ. ಸಚಿವರಾದ ಮೊದಲ ದಿನದಿಂದಲೇ ವಸೂಲಿ, ವರ್ಗಾವಣೆ, ದ್ವೇಷದ ರಾಜಕಾರಣಕ್ಕೆ ಮುನ್ನುಡಿ ಬರೆದ ಚೆಲುವರಾಯಸ್ವಾಮಿ, 6 ರಿಂದ 8 ಲಕ್ಷ ರೂಪಾಯಿ ಕಮಿಷನ್‌ಗಾಗಿ ತನ್ನ ಇಲಾಖೆಯ ಮೇಲಾಧಿಕಾರಿಗಳನ್ನು ಕಲೆಕ್ಷನ್ ಏಜೆಂಟ್‌ಗಳನ್ನಾಗಿ ಮಾಡಿಕೊಂಡಿದ್ದಾರಂತೆ ನೋಡಿ ಎಂದು ಬಿಜೆಪಿ ಕಾಲೆಳೆದಿದೆ. ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ ಒಂದೇ ಗ್ಯಾರಂಟಿ. ಮಾನ್ಯ ಸಿದ್ದರಾಮಯ್ಯನವರೇ, ಇದರಲ್ಲಿ ಯಾರ್ಯಾರ ಪಾಲೆಷ್ಟು..? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT