ಸಚಿವ ಚೆಲುವರಾಯಸ್ವಾಮಿ 
ರಾಜಕೀಯ

ಲಂಚಕ್ಕಾಗಿ ಕಿರುಕುಳ ಆರೋಪ: ಇದು ನಕಲಿ ಪತ್ರ ಎಂದ ಸಚಿವ ಚೆಲುವರಾಯಸ್ವಾಮಿ

ನನ್ನ ವಿರುದ್ಧ ರಾಜ್ಯಪಾಲರಿ ದೂರು ನೀಡಿರುವ ಪತ್ರದ ಕುರಿತು ನನಗೆ ತಿಳಿದಿಲ್ಲ, ಪತ್ರವನ್ನು ಯಾರೂ ಬರೆದಿದ್ದಾರೆಂಬುದೂ ಗೊತ್ತಿಲ್ಲ. ಆದರೆ, ಜಂಟಿ ನಿರ್ದೇಶಕರು ನಕಲಿ ಪತ್ರ ಎಂದು ಹೇಳಿದ್ದಾರೆಂದು ಸಚಿವ ಚೆಲುವರಾಯಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ನನ್ನ ವಿರುದ್ಧ ರಾಜ್ಯಪಾಲರಿ ದೂರು ನೀಡಿರುವ ಪತ್ರದ ಕುರಿತು ನನಗೆ ತಿಳಿದಿಲ್ಲ, ಪತ್ರವನ್ನು ಯಾರೂ ಬರೆದಿದ್ದಾರೆಂಬುದೂ ಗೊತ್ತಿಲ್ಲ. ಆದರೆ, ಜಂಟಿ ನಿರ್ದೇಶಕರು ನಕಲಿ ಪತ್ರ ಎಂದು ಹೇಳಿದ್ದಾರೆಂದು ಸಚಿವ ಚೆಲುವರಾಯಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನ ವಿರುದ್ಧ ರಾಜ್ಯಪಾಲರಿ ದೂರು ನೀಡಿರುವ ಪತ್ರದ ಕುರಿತು ನನಗೆ ತಿಳಿದಿಲ್ಲ, ಪತ್ರವನ್ನು ಯಾರೂ ಬರೆದಿದ್ದಾರೆಂಬುದೂ ಗೊತ್ತಿಲ್ಲ. ಆದರೆ, ಜಂಟಿ ನಿರ್ದೇಶಕರು ನಕಲಿ ಪತ್ರ ಎಂದು ಹೇಳಿದ್ದಾರೆ. ಪಾಪಾ, ಬಹಳ ಹುಡುಕಿ ಹುಡುಕಿ ಕೆಲವರು ಏನೇನೋ ಮಾಡುತ್ತಿದ್ದಾರೆ ಮಾಡಲಿ. ಈ ಬಗ್ಗೆ ತನಿಖೆ ನಡೆಸುವಂತೆ ಕೃಷಿ ಕಾರ್ಯದರ್ಶಿಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಕೆಲವರು ಬೇರೇನೋ ಮಾಡುತ್ತಿದ್ದಾರೆ. ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಮಂಡ್ಯದಲ್ಲಿ ನಾವು ಚುನಾವಣೆಯಲ್ಲಿ ಏಳು ಸ್ಥಾನಗಳ ಪೈಕಿ 6ರಲ್ಲಿ ಗೆದ್ದಿದ್ದೇವೆ. ಇದು ಕೆಲವರಿಗೆ ಸಹಿಸಲಾಗುತ್ತಿಲ್ಲ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಲಂಚದ ಆರೋಪದ ಬಗ್ಗೆ ತನಿಖೆ ಬೇಕಾದರೆ ಮಾಡಿಸೋಣ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT