ಅಮಿತ್ ಶಾ ಅವರೊಂದಿಗೆ ಬಸವರಾಜ ಬೊಮ್ಮಾಯಿ 
ರಾಜಕೀಯ

ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ- ಬಸವರಾಜ ಬೊಮ್ಮಾಯಿ ಭೇಟಿ, ಹಲವು ವಿಷಯ ಕುರಿತು ಚರ್ಚೆ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರನ್ನು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ್ದು,  ರಾಜ್ಯದ ಹಲವು  ವಿಷಯಗಳ ಕುರಿತು ಚರ್ಚಿಸಿರುವುದಾಗಿ ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ನಡೆದು ಮೂರು ತಿಂಗಳು ಕಳೆದಿದ್ದರೂ ಬಿಜೆಪಿ ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಾಯಕರು ಈ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ.
ಈ ಮಧ್ಯೆ ಅಮಿತ್ ಶಾ ಅವರನ್ನು ಬಸವರಾಜ ಬೊಮ್ಮಾಯಿ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಬಿಜೆಪಿ ಶಾಸಕರಾದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಸುರೇಶ್ ಕುಮಾರ್ , ವಿ.ಸುನೀಲ್ ಕುಮಾರ್ , ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಆರ್.ಅಶೋಕ, ಅರವಿಂದ್ ಬೆಲ್ಲದ್ ಅವರನ್ನೂ ವಿಪಕ್ಷ ನಾಯಕನ ಸ್ಥಾನಕ್ಕೆ ಪರಿಗಣಿಸಲಾಗಿದ್ದು,  ಯತ್ನಾಳ್ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೇರುವುದಕ್ಕೆ ಬಿಎಸ್‌ವೈ ವಿರೋಧ ವ್ಯಕ್ತಪಡಿಸಿದ್ದು, ಬಸವರಾಜ ಬೊಮ್ಮಾಯಿ ಅವರೇ  ಸೂಕ್ತ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ನಡುವೆ ಬಸವರಾಜ ಬೊಮ್ಮಾಯಿ, ಅಮಿತ್ ಶಾ ಭೇಟಿ ಸಾಕಷ್ಟು ಕೌತುಕ ಮೂಡಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT