ಕುಮಾರಸ್ವಾಮಿ-ಸಿದ್ದರಾಮಯ್ಯ 
ರಾಜಕೀಯ

ಶಾಸಕಾಂಗ ಪಕ್ಷದ ಸಭೆಯಲ್ಲಿ ಉಗಿದು ಉಪ್ಪಾಕಿದ ಮೇಲೆ ನಕಲಿ ಪತ್ರ 'ಅಸಲಿ'ಯಾದ ಹಕೀಕತ್ತು ಏನು ಸಿಎಂ ಸಾಹೇಬರೇ?

ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು.

ಬೆಂಗಳೂರು: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದಿದ್ದಾರೆ.

ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು  ಟೀಕಿಸಿದ್ದಾರೆ.

ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ? ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT