ಬಿಜೆಪಿ ರಾಷ್ಟ್ರೀಯ ವಕ್ತಾರ: ಶಾಜಿಯಾ ಇಲ್ಮಿ 
ರಾಜಕೀಯ

ಸಂಶೋಧನೆ ಇಲ್ಲದೆಯೇ ಸರ್ಕಾರ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿದೆ: ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ

ಪರಿಶೀಲನೆಗಳಿಲ್ಲದೆಯೇ ಸರ್ಕಾರ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿದ್ದು, ಇದೀಗ ಆರ್ಥಿಕ ಕೊರತೆಯಿಂದ ಅವುಗಳ ಜಾರಿಗೆ ತರಲು ಹೆಣಗಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಅವರು ಕಾಂಗ್ರೆಸ್ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದರು.

ಮಂಗಳೂರು: ಪರಿಶೀಲನೆಗಳಿಲ್ಲದೆಯೇ ಸರ್ಕಾರ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿದ್ದು, ಇದೀಗ ಆರ್ಥಿಕ ಕೊರತೆಯಿಂದ ಅವುಗಳ ಜಾರಿಗೆ ತರಲು ಹೆಣಗಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಅವರು ಕಾಂಗ್ರೆಸ್ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹ 2000 ನೀಡುವ ಭರವಸೆ ನೀಡಿ ಕಾಂಗ್ರೆಸ್‌ ಕರ್ನಾಟಕದಲ್ಲಿ ಗೆದ್ದಿತ್ತು. ಈ ಕಾರ್ಯಕ್ರಮವು ರಾಜ್ಯದಲ್ಲಿ ವಿತ್ತೀಯ ಕೊರತೆಗೆ ಕಾಣವಾಗಲಿದೆ. ಇದರ ಜಾರಿಯಿಂದ ವಿತ್ತೀಯ ಹೊಣೆಗಾರಿಕೆ ಕಾಯ್ದೆ ಉಲ್ಲಂಘನೆ ಆಗುವ ಅಪಾಯವಿದೆ ಎಂದು ಹಣಕಾಸು ಇಲಾಖೆ ಕಳವಳ ವ್ಯಕ್ತಪಡಿಸಿದೆ. ಭರವಸೆ ನೀಡುವುದು ಸುಲಭ. ಈಡೇರಿಸುವುದು ಕಷ್ಟ. ಭಾರಿ ಭರವಸೆಗಳ ಆಟಕ್ಕೆ ಇದರಿಂದ ಹಿನ್ನಡೆ ಆಗಲಿದೆ’ ಎಂದು ಹೇಳಿದರು.

ಆದಾಯ ತೆರಿಗೆ, ಜಿಎಸ್‌ಟಿ, ವೃತ್ತಿ ತೆರಿಗೆ ಪಾವತಿದಾರರನ್ನು, 5 ಎಕರೆಗಿಂತ ಜಾಸ್ತಿ ಒಣ ಭೂಮಿ ಹೊಂದಿರುವವರನ್ನು, ಅಂಗನವಾಡಿ ಕಾರ್ಯಕರ್ತೆಯರನ್ನು, ಆಶಾ ಕಾರ್ಯಕರ್ತೆಯರನ್ನು, ಆರ್ಥಿಕ ಭದ್ರತೆ ಯೋಜನೆಗಳ ಫಲಾನುಭವಿಗಳನ್ನು ಹಾಗೂ ಸರ್ಕಾರಿ ಉದ್ಯೋಗಿಗಳನ್ನು ಈ ಕಾರ್ಯಕ್ರಮದಿಂದ ಹೊರಗಿಟ್ಟರೆ ₹4,800 ಕೋಟಿಗಳಷ್ಟು ಹೊರೆ ಕಡಿಮೆ ಆಗಲಿದೆ ಎಂದು ಹಣಕಾಸು ಇಲಾಖೆ ಸಲಹೆ ನೀಡಿದೆ. ಪತಿ ಆದಾಯ ತೆರಿಗೆ ಕಟ್ಟುತ್ತಿದ್ದರೆ ಪತ್ನಿಗೆ ಈ ಸವಲತ್ತು ನೀಡಬಾರದು ಎಂದು ಹೇಳಿದೆ. ಆಗ ಫಲಾನುಭವಿಗಳ ಸಂಖ್ಯೆ ಕುಸಿಯುತ್ತಲೇ ಸಾಗಲಿದೆ. ತಮಗೂ ಈ ಯೋಜನೆಯಿಂದ ಪ್ರಯೋಜನವಾಗುತ್ತದೆ ಎಂದು ನಂಬಿದ್ದ ಮಹಿಳೆಯರು ನಿರಾಸೆಗೊಳಗಾಗಿದ್ದಾರೆ. ಎಲ್ಲರನ್ನೂ ಹೊರಗಿಟ್ಟರೆ ಮತ್ತೆ ಉಳಿಯುವುದು ಯಾರು’ ಎಂದು ಪ್ರಶ್ನಿಸಿದರು.

ಇದು ಒಂದು ಗ್ಯಾರಂಟಿಯ ವಿಚಾರ ಮಾತ್ರ. ಉಳಿದ ನಾಲ್ಕು ಗ್ಯಾರಂಟಿ ಜಾರಿಯಾಗುವಾಗ ರಾಜ್ಯದ ಸ್ಥಿತಿ ಹೇಗಿರಬಹುದು. ರಾಜ್ಯದ ಅಭಿವೃದ್ಧಿ ಯಾವ ದಿಸೆಯಲ್ಲಿ ಸಾಗಲಿದೆ. ರಸ್ತೆ, ಹೆದ್ದಾರಿ ಮೊದಲಾದ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಸೇವೆಗಳ ಪಾಡೇನು. ಇವುಗಳಿಗೆ ಸರ್ಕಾರ ನ್ಯಾಯ ಒದಗಿಸಲಾಗುತ್ತದೆಯೇ ಎಂಬುದಕ್ಕೆ ಕಾಂಗ್ರೆಸ್‌ ಉತ್ತರಿಸಬೇಕು’ ಎಂದು ಒತ್ತಾಯಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಪ್ರಸ್ತುತ ಕೇಂದ್ರ ಸರ್ಕಾರವು ಜನರಿಗೆ ಉತ್ತಮ ರಸ್ತೆ ಮೂಲಸೌಕರ್ಯ, ಆರೋಗ್ಯ ಸೌಲಭ್ಯಗಳು ಇತ್ಯಾದಿಗಳನ್ನು ಪಡೆಯಲು ಹಲವಾರು ಯೋಜನೆಗಳನ್ನು ತಂದಿದೆ. ಆದರೆ. ಇಲ್ಲಿನ ಕರ್ನಾಟಕ ಸರ್ಕಾರವು ಈ ‘ರೇವಡಿ ಸಂಸ್ಕೃತಿ’ಯೊಂದಿಗೆ ಆರೋಗ್ಯ, ಶಿಕ್ಷಣ ಅಥವಾ ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಲ್ಲಿ ರಾಜಿ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ ಚುನಾವಣೆ ವೇಳೆ ಬಿಜೆಪಿ ನೀಡಿದ್ದ ಉಚಿತ ಭರವಸೆಗಳ ಕುರಿತು ಕೇಳಲಾದ ಪ್ರಶ್ನೆಗೆ, ಈ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT