ಬಿಬಿಎಂಪಿ ಕಚೇರಿಯ ದಾಖಲೆ ಇದ್ದ ಕೊಠಡಿಗೆ ಬೆಂಕಿ 
ರಾಜಕೀಯ

ಬಿಬಿಎಂಪಿ ಕಚೇರಿಯ ದಾಖಲೆ ಇದ್ದ ಕೊಠಡಿಗೆ ಬೆಂಕಿ; ಆಕಸ್ಮಿಕವಲ್ಲ, ಷಡ್ಯಂತ್ರ ಎಂದ ಕಾಂಗ್ರೆಸ್

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು ಷಡ್ಯಂತ್ರ ಎಂದು ಆಡಳಿತರೂಢ...

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು ಷಡ್ಯಂತ್ರ ಎಂದು ಆಡಳಿತರೂಢ ಕಾಂಗ್ರೆಸ್ ಆರೋಪಿಸಿದೆ.

ಅಗ್ನಿ ಅವಘಡ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಬಿಎಂಪಿ ಕಚೇರಿಯ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ ಎಂದು ದೂರಿದೆ.

40 ಪರ್ಸೆಂಟ್ ಕಮಿಷನ್ನಿನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಮತ್ತು ಇದರ ಹಿಂದಿರುವ ಬಿಜೆಪಿಯ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಕಾಂಗ್ರೆಸ್ ಗುಡುಗಿದೆ.

ಬಿಜೆಪಿ ತಾನು ಮಾಡಿದ ಭ್ರಷ್ಟಾಚಾರದ ಸಾಕ್ಷ್ಯಗಳಿಗೆ ಬೆಂಕಿ ಇಟ್ಟು ಬಚಾವಾಗಿಬಿಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಬಿಬಿಎಂಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಎಂಟು ನೌಕರರಿಗೆ ಗಾಯವಾಗಿದೆ, ಮೂರು ಜನರ ಸ್ಥಿತಿ ಗಂಭೀರವಾಗಿದೆ, ಇವರೆಲ್ಲರಿಗೂ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.

ತನಿಖೆಗೆ ಹೆದರಿದ ಭ್ರಷ್ಟರು ನಡೆಸಿದ ಇಂತಹ ಹೀನ ಕೃತ್ಯದ ಹಿಂದಿರುವ ಕೈಗಳಿಗೆ ಕೊಳ ತೊಡಿಸುವುದು ಖಚಿತ.

ಈ ಹಿಂದೆ ಬಿಜೆಪಿ ಆಡಳಿತವಧಿಯಲ್ಲಿ ಬಿಬಿಎಂಪಿಗೆ ಬೆಂಕಿ ಇಟ್ಟವರೇ ಇಂದೂ ಸಹ ಇಟ್ಟಿದ್ದಾರೆ ಎಂಬ ಗುಮಾನಿ ಹೆಚ್ಚಿದೆ.

ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ತನಿಖೆ ನಡೆಸಿ ತೆರೆಮರೆಯಲ್ಲಿರುವ ಭ್ರಷ್ಟರನ್ನು ಬಯಲಿಗೆಳೆಯುತ್ತೇವೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT