ರವಿಕುಮಾರ್. 
ರಾಜಕೀಯ

'ಪೇಸಿಎಂ' ಪೋಸ್ಟರ್ ಅಭಿಯಾನ ಬಳಿಕ ಪೊಲೀಸರಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ: ರವಿಕುಮಾರ್

ಪೇಸಿಎಂ ಪೋಸ್ಟರ್ ಅಭಿಯಾನ ಬಳಿಕ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರಿಗೆ ಬೆದರಿಸಿ, ಕಿರುಕುಳ ನೀಡುತ್ತಿದ್ದಾರೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಬೆಂಗಳೂರು: ಪೇಸಿಎಂ ಪೋಸ್ಟರ್ ಅಭಿಯಾನ ಬಳಿಕ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರಿಗೆ ಬೆದರಿಸಿ, ಕಿರುಕುಳ ನೀಡುತ್ತಿದ್ದಾರೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಅವರು ಉನ್ನತ ಪೊಲೀಸ್‌ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ  ಸುದ್ದಿಗಾರರ ಜತೆ ಮಾತನಾಡಿದರು. ಕಾಂಗ್ರೆಸ್‌ ಸರ್ಕಾರದ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಕರ್ತರನ್ನು ಹೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಪೊಲೀಸರು ನಮ್ಮ ಕಾರ್ಯಕರ್ತರಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಐಟಿ ಸೆಲ್ ಸರ್ಕಾರದ ಪ್ರತಿಯೊಂದು ಹಂತದಲ್ಲೂ ಹೆಚ್ಚುತ್ತಿರುವ ಭ್ರಷ್ಟಾಚಾರದ ಬಗ್ಗೆ ಆಡಳಿತ ಪಕ್ಷವನ್ನು ಪ್ರಶ್ನಿಸುತ್ತಿದೆ. ಇದು ಯಾವುದೇ ರಾಜಕೀಯ ಪಕ್ಷದ ಹಕ್ಕು, ತಮ್ಮ ತಪ್ಪುಗಳನ್ನು ಸರಿಪಡಿಸುವ ಬದಲು, ಅವರು ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT