ತಲಪಾಡಿ ಗ್ರಾಮ ಪಂಚಾಯಿತಿ ಎಸ್‌ಡಿಪಿಐ ತೆಕ್ಕೆಗೆ 
ರಾಜಕೀಯ

ತಲಪಾಡಿ ಗ್ರಾಮ ಪಂಚಾಯಿತಿ ಎಸ್‌ಡಿಪಿಐ ತೆಕ್ಕೆಗೆ! ಬಿಜೆಪಿಗೆ ಮುಖಭಂಗ; ಒಳ ಒಪ್ಪಂದ ಮಾಡಿಕೊಂಡ ಇಬ್ಬರು ಸದಸ್ಯರು ಅಮಾನತು!

ಮಂಗಳೂರು ಹೊರವಲಯದ ಉಳ್ಳಾಲದ ತಲಪಾಡಿ ಗ್ರಾಮ ಪಂಚಾಯಿತಿಗೆ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಟಿ ಇಸ್ಮಾಯಿಲ್ ಅವರು ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರ ನೆರವಿನಿಂದ ಗುರುವಾರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲದ ತಲಪಾಡಿ ಗ್ರಾಮ ಪಂಚಾಯಿತಿಗೆ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಟಿ ಇಸ್ಮಾಯಿಲ್ ಅವರು ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರ ನೆರವಿನಿಂದ ಗುರುವಾರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

24 ಸದಸ್ಯ ಬಲದ ಪಂಚಾಯಿತಿಯಲ್ಲಿ 13 ಬಿಜೆಪಿ, 10 ಎಸ್‌ಡಿಪಿಐ ಮತ್ತು ಒಬ್ಬರು ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಮತದಾನದ ವೇಳೆ ಕಾಂಗ್ರೆಸ್ ಬೆಂಬಲಿತ ಏಕೈಕ ಸದಸ್ಯ ಮತ್ತು ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಗೈರು ಹಾಜರಾಗಿದ್ದರು. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಬಿಜೆಪಿ ಇಬ್ಬರು ಸದಸ್ಯರನ್ನು ಅಮಾನತು ಮಾಡಿದೆ.

ಇಬ್ಬರು ಸದಸ್ಯರು ಬಿಜೆಪಿಯನ್ನು ಬೆಂಬಲಿಸಿ ಎಸ್‌ಡಿಪಿಐ ಅಭ್ಯರ್ಥಿಯನ್ನು ಬೆಂಬಲಿಸಿದ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಎಸ್‌ಡಿಪಿಐಗೆ ಬೆಂಬಲ ನಿರಾಕರಿಸಿದ್ದಾರೆ.

ಬಿಜೆಪಿ ಬೆಂಬಲಿತ 13 ಸದಸ್ಯರ ಪೈಕಿ ಫಯಾಜ್ ಮತ್ತು ಮೊಹಮ್ಮದ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದರೆ ಬಿಜೆಪಿ ಸತ್ಯರಾಜ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು. ಬಿಜೆಪಿ ನಿರ್ಧಾರದಿಂದ ಅಸಮಾಧಾನಗೊಂಡಿದ್ದ ಇವರಿಬ್ಬರು ಇಸ್ಮಾಯಿಲ್ ಪರ ಮತ ಚಲಾಯಿಸಿದರು. ಎಸ್‌ಡಿಪಿಐ ಮತ್ತು ಬಿಜೆಪಿ ತಲಾ 11 ಮತಗಳನ್ನು ಪಡೆದಿವೆ. ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಟಾಸ್‌ನಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ

ಪಂಚಾಯತಿಗಳಿಗೆ ಚುನಾವಣೆಗಳು ಪಕ್ಷದ ಆಧಾರದ ಮೇಲೆ ನಡೆಯುವುದಿಲ್ಲ. ಈ ಚುನಾವಣೆಯಲ್ಲಿ ಎಸ್‌ಡಿಪಿಐ ಅಥವಾ ಇನ್ನಾವುದೇ ಪಕ್ಷವನ್ನು ಬಿಜೆಪಿ ಬೆಂಬಲಿಸಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯಟ್ವೀಟ್ ಮಾಡಿದ್ದಾರೆ.

ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದು ಎಸ್‌ಡಿಪಿಐ ಸ್ಪಷ್ಟಪಡಿಸಿದೆ. ಬಿಜೆಪಿಗೆ ಸ್ಪಷ್ಟ ಬಹುಮತವಿರುವುದರಿಂದ ನಾವು ಏಕೈಕ ಕಾಂಗ್ರೆಸ್ ಸದಸ್ಯರ ಬೆಂಬಲವನ್ನು ಕೋರಿದೆವು, ಆದರೆ ಅವರು ನಿರಾಕರಿಸಿದರು. ಬಿಜೆಪಿಯಿಂದ ಅಮಾನತುಗೊಂಡ ಇಬ್ಬರು ಸದಸ್ಯರು ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂದು ಎಸ್‌ಡಿಪಿಐ ಮುಖಂಡರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT