ದಿಗ್ವಿಜಯ್ ಸಿಂಗ್ 
ರಾಜಕೀಯ

'ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯ ಎಲ್ಲಾ ಪ್ರಯತ್ನಗಳು ವಿಫಲವಾಗುತ್ತವೆ': ದಿಗ್ವಿಜಯ್ ಸಿಂಗ್

ಜನರು ಕಾಂಗ್ರೆಸ್‌ಗೆ ಭಾರಿ ಜನಾದೇಶ ನೀಡಿರುವುದರಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಕೈಗೊಳ್ಳುವ ಬಿಜೆಪಿಯ ಯಾವುದೇ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಂಗಳವಾರ ಹೇಳಿದ್ದಾರೆ. 

ಹುಬ್ಬಳ್ಳಿ: ಜನರು ಕಾಂಗ್ರೆಸ್‌ಗೆ ಭಾರಿ ಜನಾದೇಶ ನೀಡಿರುವುದರಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಕೈಗೊಳ್ಳುವ ಬಿಜೆಪಿಯ ಯಾವುದೇ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಂಗಳವಾರ ಹೇಳಿದ್ದಾರೆ. 
ಪಕ್ಷದ ಜಿಲ್ಲಾ ಘಟಕದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಸಿಂಗ್

ಸುದ್ದಿಗಾರರೊಂದಿಗೆ ಮಾತನಾಡಿ, ‘ಶೇ 40 ಕಮಿಷನ್ ಹಣ ಬಳಸಿ ಬಿಜೆಪಿಯು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಜನರು ಪಕ್ಷಕ್ಕೆ ಸಾಕಷ್ಟು ಸ್ಥಾನಗಳನ್ನು ನೀಡಿ ಆಶೀರ್ವದಿಸಿರುವುದರಿಂದ ಬಿಜೆಪಿಯ ಪ್ರತಿಯೊಂದು ಪ್ರಯತ್ನವೂ ವಿಫಲವಾಗುವುದು ಖಚಿತ ಎಂದರು.

ಕೇಸರಿ ಪಕ್ಷವನ್ನು ಲೇವಡಿ ಮಾಡಿದ ಅವರು, ಜನರಿಂದ ತಿರಸ್ಕೃತವಾಗಿದ್ದರೂ, ಬಿಜೆಪಿ ನಾಯಕರು ಇನ್ನೂ ಪಾಠ ಕಲಿತಿಲ್ಲ. ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಸಹ ‘ಶೇ 50 ರಷ್ಟು ಕಮಿಷನ್’ ಆರೋಪದೊಂದಿಗೆ ದೊಡ್ಡ ಪ್ರಮಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ದೂರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ನೀಡಿರುವ ಜನಾದೇಶವು ರಾಷ್ಟ್ರರಾಜಕಾರಣಕ್ಕೆ ಹೊಸ ದಿಕ್ಕನ್ನು ನೀಡಿದೆ. ಕಾಂಗ್ರೆಸ್‌ಗೆ ಏಕತೆಯಲ್ಲಿ ನಂಬಿಕೆಯಿದೆ. ಆದರೆ, ಬಿಜೆಪಿಯು ಧರ್ಮದ ಆಧಾರದ ಮೇಲೆ ಜನರ ಮನಸ್ಸಿಗೆ ವಿಷವನ್ನು ತುಂಬುತ್ತಿದೆ ಎಂದರು. 

ಮಣಿಪುರ ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈಶಾನ್ಯ ರಾಜ್ಯದಲ್ಲಿನ ಅಸ್ಥಿರ ಪರಿಸ್ಥಿತಿಗೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಹೊಣೆಗಾರರಾಗಿದ್ದಾರೆ. ರಾಜ್ಯದಲ್ಲಿನ ಗಲಭೆಗಳು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಜನರ ನಡುವೆ ಒಡಕು ಮೂಡಿಸುವ ಬಿಜೆಪಿಯ ರಾಜಕೀಯದ ಪರಿಣಾಮವಾಗಿದೆ. ರಾಜ್ಯದ ಅಮಾಯಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT