ಮುನಿರತ್ನ 
ರಾಜಕೀಯ

ರಾಜಕೀಯ ನಿವೃತ್ತಿ ಪಡೆಯುತ್ತೇನೆ ಹೊರತು, ಕಾಂಗ್ರೆಸ್‌ಗೆ ಹೋಗಲ್ಲ- ಮುನಿರತ್ನ: ಯಾರೇ ಬಂದರೂ ಪಕ್ಷಕ್ಕೆ ಸ್ವಾಗತ- ಡಿಕೆ ಸುರೇಶ್

ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬಗ್ಗೆ ಆರ್.‌ಆರ್‌.ನಗರ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬಗ್ಗೆ ಆರ್.‌ಆರ್‌.ನಗರ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದಾರೆ.

ಬುಧವಾರ ನಗರದ ವೈಯಾಲಿಕಾವಲ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ''ನನಗೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ. ಬಿಜೆಪಿಯಲ್ಲೇ ಇರುತ್ತೇನೆ ರಾಜಕೀಯ ಬೇಡ ಎನಿಸಿದರೇ ನಿವೃತ್ತಿಯಾಗುತ್ತೇನೆ. ನಾನು ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟಲ್ಲ'' ಎಂದು ಸ್ಪಷ್ಟನೆ ನೀಡಿದರು.

17 ಶಾಸಕರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೋ ಗೊತ್ತಿಲ್ಲ, ನಾನಂತೂ ಬಿಜೆಪಿ ಬಿಟ್ಟು ಹೋಗುವುದಿಲ್ಲ, ಡಿಕೆ ಶಿವಕುಮಾರ್ ಬೆಂಗಳೂರು ಸಚಿವರಾಗಿರುವ ಹಿನ್ನಲೆ ಭೇಟಿಯಾಗಿದ್ದೇನೆ. ರಾಜಕೀಯ ನಿವೃತ್ತಿ ಪಡೆದ್ರೂ ಪರ್ವಾಗಿಲ್ಲ, ಬಿಜೆಪಿ ಬಿಟ್ಟು ಹೋಗಲ್ಲ, ಡಿಕೆಶಿ ಜೊತೆ ರಾಜಕೀಯದ ಸಂಬಂಧ ಉಳಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

17 ಶಾಸಕರ ಘರ್ ವಾಪ್ಸಿ ಸಂಬಂಧ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ ಸುರೇಶ್, ಲೋಕಸಭಾ ಚುನಾವಣೆ ಬಗ್ಗೆ ಈಗಾಗಲೇ ವರಿಷ್ಠರ ಜೊತೆ ದೆಹಲಿಯಲ್ಲಿ ಸಭೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆ, ತಯಾರಿ ಬಗ್ಗೆ ಮಾರ್ಗಸೂಚಿ ನೀಡಿದ್ದಾರೆ. ಪಕ್ಷಕ್ಕೆ ಯಾರೇ ಬಂದ್ರೂ ಸ್ವಾಗತ, ಇದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು  ಹೇಳಿದ್ದಾರೆ.

ರಾಜ್ಯ ರಾಜಕೀಯಕ್ಕೆ ಮಹತ್ವದ ತಿರುವು ನೀಡಿದ ಮಿತ್ರ ಮಂಡಳಿ, ಮುಂದಿನ ದಾಳ ಉರುಳಿಸೋಕೆ ಸಜ್ಜಾಗುತ್ತಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಬಿಜೆಪಿಗೆ ಹಾರಿದ್ದ ಪಕ್ಷಾಂತರಿಗಳು, ದೋಸ್ತಿ ಸರ್ಕಾರವನ್ನ ಉರುಳಿಸಿದ್ದಷ್ಟೇ ಅಲ್ಲ, ಬಿಜೆಪಿ ಸರ್ಕಾರ ರಚನೆಗೂ ಕಾರಣವಾಗಿ ಮಂತ್ರಿಗಳಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇ ತಡ, ಇವರೆಲ್ಲರೂ ತಮ್ಮ ತವರು ಪಕ್ಷಕ್ಕೆ ವಾಪಸ್ ಆಗುವ ಸಿದ್ದತೆಯಲ್ಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT