ಕಾಂಗ್ರೆಸ್ 
ರಾಜಕೀಯ

ಸಮರ್ಥ, ಸುಶಿಕ್ಷಿತ, ಪಕ್ಷನಿಷ್ಠ ಯುವ ರಾಜಕಾರಣಿಗಳಿಗೆ ಪಕ್ಷ ಅವಕಾಶ ನೀಡಲಿ: ಕಾಂಗ್ರೆಸ್ ವಕ್ತಾರ ಸಂಕೇತ್ ಏಣಗಿ

ಕರ್ನಾಟಕದ ವಿಧಾನಪರಿಷತ್‌ಗೆ ಮೂರು ನಾಮನಿರ್ದೇಶಿತ ಸ್ಥಾನಗಳಿಗೆ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬಹಿರಂಗವಾಗಿಯೇ ನಾಯಕರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ.

ಬೆಂಗಳೂರು: ಕರ್ನಾಟಕದ ವಿಧಾನಪರಿಷತ್‌ಗೆ ಮೂರು ನಾಮನಿರ್ದೇಶಿತ ಸ್ಥಾನಗಳಿಗೆ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬಹಿರಂಗವಾಗಿಯೇ ನಾಯಕರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ.

ಕರ್ನಾಟಕ ವಿಧಾನಪರಿಷತ್​ಗೆ (Karnataka Legislative Council)  ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ರವಾನಿಸಿದ್ದು,  ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ (Former Minister Umashri), ಎಂಆರ್ ಸೀತಾರಾಮ್ (MR Seetharam) ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ (Sudham Das) ಹೆಸರನ್ನು ಅಂತಿಮಗೊಳಿಸಿ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ರಾಜ್ಯಪಾಲರಿಗೆ ರವಾನಿಸಿದ್ದಾರೆ.

ಇದರ ಬೆನ್ನಲ್ಲೇ ಕಾಂಗ್ರೆಸ್ ಮನೆಯಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ವಿಧಾನಪರಿಷತ್ ಸ್ಥಾನದಿಂದ ವಂಚಿತರಾದ ಮುಖಂಡರು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದು, ಕಾಂಗ್ರೆಸ್​ ವಕ್ತಾರ ಹಾಗೂ ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ಟ್ವಿಟ್ಟರ್​ನಲ್ಲಿ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ.

ಮತ್ತೆ ಹಿರಿಯರಿಗೆ ಅವಕಾಶ ಕಲ್ಪಿಸಿದ್ದಕ್ಕೆ ಅವರು ಬೇಸರ ಹೊರ ಹಾಕಿದ್ದು, 'ಪ್ರಾಮಾಣಿಕ ಅಭಿಪ್ರಾಯ: ಹಿರಿಯ ರಾಜಕಾರಣಿಗಳು ಹಾಗೂ ಅವರ ಪರಿವಾರದವರಿಗೆ ಮಾತ್ರ ಯಾವತ್ತೂ ಮಣೆ ಹಾಕದೇ, ಇನ್ನಾದರೂ ಸಮರ್ಥ, ಸುಶಿಕ್ಷಿತ, ಪಕ್ಷನಿಷ್ಠ, ನ್ಯಾಯಪರತೆ ಇರುವ ಯುವ ರಾಜಕಾರಣಿಗಳಿಗೆ ಪಕ್ಷ ವಿಶೇಷ ಅವಕಾಶ ನೀಡಬೇಕು. ಹೀಗೆಯೇ ಮುಂದುವರಿದರೆ, ಪಕ್ಷ ಮುಂದೊಮ್ಮೆ ಯುವ ರಾಜಕಾರಣಿಗಳಿಲ್ಲದೇ ಬರಿದಾದರೆ ವಿಶೇಷವೇನಿಲ್ಲ' ಎಂದು ಬರೆದುಕೊಂಡಿದ್ದಾರೆ.

ಪರಿಷತ್ತಿನ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದೆ. ಈ ಪಟ್ಟಿಯಲ್ಲಿ ಖ್ಯಾತ ನಟಿ-ರಾಜಕಾರಣಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಮತ್ತು ಎಚ್.ಪಿ. ಸುಧಾಮ ದಾಸ್, ಮಾಜಿ ಕಾಂಗ್ರೆಸ್ ಶಾಸಕ ಎಚ್.ಪುಟ್ಟದಾಸ ಅವರ ಪುತ್ರರಿದ್ದಾರೆ. ಉಮಾಶ್ರೀ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದು, ಅವರು ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2013 ಮತ್ತು 2018 ರ ನಡುವೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದರು. 2018 ರಲ್ಲಿ ಅವರು ಚುನಾವಣೆಯಲ್ಲಿ ಸೋತರು ಮತ್ತು 2023 ರಲ್ಲಿ ಉಮಾಶ್ರೀ ಅವರು ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ. ಕಲಾವಿದೆಯ ಕೋಟಾದ ಅಡಿಯಲ್ಲಿ ಅವರನ್ನು ಎಂಎಲ್‌ಸಿ ಹುದ್ದೆಗೆ ಪರಿಗಣಿಸಲಾಗಿದೆ.

ಎಂ.ಆರ್.ಸೀತಾರಾಮ್ ಅವರು ಮಾಜಿ ಸಚಿವ, ಉದ್ಯಮಿ ಮತ್ತು ಶಿಕ್ಷಣತಜ್ಞ. ಅವರು ಹೆಚ್ಚು ಸಂಪನ್ಮೂಲ ಹೊಂದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರು ಎನ್ನುತ್ತವೆ ಮೂಲಗಳು. ಶಿಕ್ಷಣಕ್ಕೆ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಮೀಸಲಾದ ಕೋಟಾದ ಅಡಿಯಲ್ಲಿ ಅವರನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ಸುಧಾಮ ದಾಸ್ ಸಾತನೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಶಾಸಕ ಎಚ್.ಪುಟ್ಟದಾಸ ಅವರ ಪುತ್ರ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಂತರ ಸಾತನೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಐದು ತಿಂಗಳ ಹಿಂದೆ ಸುಧನ್ ದಾಸ್ ಕಾಂಗ್ರೆಸ್ ಸೇರಿದ್ದು, ಅವರನ್ನು ಸಮಾಜ ಸೇವೆಯ ಕೋಟಾದಡಿ ಪರಿಗಣಿಸಲಾಗಿದೆ. ಸುಧಾಮ್ ದಾಸ್ ಅವರು ಜಾರಿ ನಿರ್ದೇಶನಾಲಯದ (ಇಡಿ) ಮಾಜಿ ಅಧಿಕಾರಿಯೂ ಹೌದು. ಡಿಸಿಎಂ ಡಿಕೆ ಶಿವಕುಮಾರ್ ಅವರು ಸುಧಾಮ್ ದಾಸ್ ಅವರಿಗೆ ಎಂಎಲ್‌ಸಿ ಸ್ಥಾನ ನೀಡುವುದಾಗಿ ಭರವಸೆ ನೀಡಿ ಪಕ್ಷಕ್ಕೆ ಕರೆತಂದಿದ್ದರು. ಸುಧಾಮ್ ದಾಸ್ ಅವರ ಪದಗ್ರಹಣಕ್ಕೆ ಪಕ್ಷದ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಹೈಕಮಾಂಡ್‌ಗೆ ದೂರು ಕೂಡ ನೀಡಲಾಗಿದೆ.

ಸುಧಾಮ್ ದಾಸ್ ಅವರು ಭಾರತೀಯ ಕಂದಾಯ ಸೇವೆ (IRS) ಅಧಿಕಾರಿಯಾಗಿದ್ದಾರೆ ಮತ್ತು ಕಾಂಗ್ರೆಸ್ ಸೇರಲು VRS ತೆಗೆದುಕೊಂಡಿದ್ದರು. ಅವರು ಕರ್ನಾಟಕ ಮತ್ತು ಕೇರಳದ ಇಡಿ ಉಸ್ತುವಾರಿ ಉಪ ನಿರ್ದೇಶಕರಾಗಿದ್ದರು. ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ.

ಅಂತೆಯೇ ಇದು ಕಾಂಗ್ರೆಸ್ ನಲ್ಲಿ ಆಂತರಿಕ ಕಚ್ಚಾಟಕ್ಕೆ ದಾರಿ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ನಡುವೆ ನಾಮಪತ್ರ ಸಲ್ಲಿಕೆ ವಿವಾದವಾಗಿ ಪರಿಣಮಿಸಿದೆ. ಪಕ್ಷದ ದಲಿತ ಮುಖಂಡರು ಅವರ ನಾಮಪತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಏತನ್ಮಧ್ಯೆ, ಹಿರಿಯ ನಾಯಕ ಎಂ.ಆರ್.ಸೀತಾರಾಮ್ ಅವರನ್ನು ಎಂಎಲ್ಸಿ ಸ್ಥಾನಕ್ಕೆ ನಾಮನಿರ್ದೇಶನ ಮಾಡುವುದರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ಸೀತಾರಾಮ್ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದು, ಅವರ ನಾಮಪತ್ರವನ್ನು ತಿರಸ್ಕರಿಸಬೇಕು. ಈ ಸಂಬಂಧ ರಾಜ್ಯಪಾಲರು ಸರ್ಕಾರದಿಂದ ವಿವರಣೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...