ಎಚ್.ಡಿ ಕುಮಾರಸ್ವಾಮಿ ಮತ್ತು ಸಿ.ಟಿ ರವಿ 
ರಾಜಕೀಯ

ಎಚ್.ಡಿ ಕುಮಾರಸ್ವಾಮಿ ಹಾವಾಡಿಗ, ಸಿ.ಟಿ ರವಿ ಹುಚ್ಚ: ಸಚಿವ ಕೆ.ಎನ್ ರಾಜಣ್ಣ ಹೀಗೆ ಹೇಳಿದ್ದೇಕೆ?

ಬಿಜೆಪಿ ನಾಯಕ ಸಿ.ಟಿ. ರವಿ ಒಬ್ಬ ಹುಚ್ಚ ಮತ್ತು ಜೆಡಿಎಸ್‌ ಶಾಸಕ ಎಚ್‌.ಡಿ. ಕುಮಾರಸ್ವಾಮಿ ಅವರು ಹಾವಾಡಿಗ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಟೀಕಿಸಿದ್ದಾರೆ.

ತುಮಕೂರು: ಬಿಜೆಪಿ ನಾಯಕ ಸಿ.ಟಿ. ರವಿ ಒಬ್ಬ ಹುಚ್ಚ ಮತ್ತು ಜೆಡಿಎಸ್‌ ಶಾಸಕ ಎಚ್‌.ಡಿ. ಕುಮಾರಸ್ವಾಮಿ ಅವರು ಹಾವಾಡಿಗ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಟೀಕಿಸಿದ್ದಾರೆ.

ಸರ್ಕಾರ ಆರು ತಿಂಗಳಿಗೆ ಬೀಳುತ್ತದೆ ಎಂಬುವುದು ಸಿ.ಟಿ.ರವಿ ಅವರ ಅಭಿಪ್ರಾಯ ಇರಬಹುದು. ತುಮಕೂರಿನಲ್ಲಿ ಮಾತನಾಡಿದ ಅವರು ಅವೆಲ್ಲಾ ಹುಚ್ಚರ ಸ್ಟೇಟ್​​ಮೆಂಟ್, ಹುಚ್ಚರ ಸ್ಟೇಟ್​​ಮೆಂಟ್​​ಗೆಲ್ಲ ಉತ್ತರ ಹೇಳೋಕಾಗಲ್ಲ. ಆರು ತಿಂಗಳಿಗೆ ಬಿದ್ದೋಗುತ್ತೆ, ಮೂರು ತಿಂಗಳಿಗೆ ಬಿದ್ದೋಗುತ್ತೆ ಅದು ಅವರ ಅಭಿಪ್ರಾಯ ಇರಬಹುದು ಅಷ್ಟೇ. ಆ ಹೇಳಿಕೆಗೆ ಕಿಮ್ಮತ್ತು ಕೊಡೋ ಅವಶ್ಯಕತೆ ಇಲ್ಲ  ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಕುಮಾರಸ್ವಾಮಿ ಅವರು ಸುಮ್ಮನೆ ಪೆನ್‌ಡ್ರೈವ್‌ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ ಎಂದರು. ಹಾವಾಡಿಗರನ್ನು ನೋಡಿದ್ದೀವಿ ನಾವು. ಒಂದು ಬುಟ್ಟಿಯನ್ನ ತಂದಿಟ್ಟು, ಇದರಲ್ಲಿ ಆ ಹಾವಿದೆ. ಈ ಹಾವಿದೆ, ಇದನ್ನ ಬಿಡ್ತೀನಿ, ಅದನ್ನ ಬಿಡ್ತೀನಿ ಅಂತಾ ತೋರಿಸಿದ್ದನ್ನ. ಹಾವಾಡಿಗರ ಆಟವನ್ನ ನೋಡಿದ್ದೀವಿ. ಅದಕ್ಕೂ ಇದಕ್ಕೂ ಸಾಮ್ಯತೆಯಿದೆ ಅಂತಾ ಯಾಕೆ ಭಾವಿಸಬಾರದು. ಏನಿದ್ರೆ ಬಿಡ್ಲಿ, ಬಿಡೋ ತಾಕತ್ತಿದ್ರೆ ಬಿಡ್ಲಿ ಅಂತಾ ಎಷ್ಟು ಜನ ಸಚಿವರು ಹೇಳಿದ್ದಾರೆ.

ಯಾರು ತಪ್ಪು ಮಾಡಿದ್ದಾರೆ ಅಂತ ಅದ್ರಲ್ಲಿ ಇದೆ ಅವರಿಗೆ ಸಾರ್ವಜನಿಕವಾಗಿ ಶಿಕ್ಷೆ ಆಗಲಿ. ಸುಮ್ನೆ ಪೆನ್ ಡ್ರೈವ್ ಇಟ್ಕೊಂಡು, ಇದೊಂತರ ಬ್ಲಾಕ್ ಮೇಲ್. ಬ್ಲಾಕ್ ಮೇಲ್ ಅಲ್ಲದೇ ಬೇರೇನಲ್ಲ ಇದು. ತೆಗೆಯೋದು, ಇಟ್ಕೋಳೋದು, ತಾಕತ್ತಿದ್ರೆ ರಿಲೀಸ್ ಮಾಡಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT