minister Chaluvarayaswamy 
ರಾಜಕೀಯ

10-15 ಮಂದಿ ಹಾಲಿ-ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ: ಸಚಿವ ಚಲುವರಾಯಸ್ವಾಮಿ

10 ರಿಂದ 15 ಮಂದಿ ಮಾಜಿ ಹಾಗೂ ಹಾಲಿ‌ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಮೈಸೂರು: 10 ರಿಂದ 15 ಮಂದಿ ಮಾಜಿ ಹಾಗೂ ಹಾಲಿ‌ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿರುವ ನಾಯಕರೊಂದಿಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ. ಅವರ ಹೆಸರು ಈಗ ಹೇಳಲು ಸಾಧ್ಯವಿಲ್ಲ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದು ಹೇಳಿದರು.

ರಾಜ್ಯದಲ್ಲಿ ಬರ ಘೋಷಣೆ ಮಾಡುವ ವಿಚಾರದ ಬಗ್ಗೆ ಸಭೆ ನಡೆಸಿದ್ದೇವೆ. ಜೂನ್ ಮತ್ತು ಆಗಸ್ಟ್ ನಲ್ಲಿ‌ ಮಳೆ‌‌‌ ಕೊರತೆ‌ಯಾಗಿದೆ. ಶೇ 60 ರಷ್ಟು ಬರ ಇದ್ದರೆ ಕೇಂದ್ರ ಅನುದಾದ ಬಿಡುಗಡೆ ಮಾಡುತ್ತದೆ. ಇದನ್ನು ಶೇ.30ಕ್ಕೆ  ಇಳಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ಕೇಂದ್ರದಿಂದ ಉತ್ತರ ಬಂದಿಲ್ಲ. ಇದರಿಂದ ವಿಶೇಷ ಅನುದಾನವನ್ನ ಕೇಂದ್ರದಿಂದ ಕೇಳಿಲ್ಲ. ಶೇ.30 ಇಳಿಸುವ ಬಗ್ಗೆ ಉತ್ತರ ಬಂದ ನಂತರ ಸಭೆ ನಡೆಸಿ ತೀರ್ಮಾನ‌ ಮಾಡಲಾಗುತ್ತದೆ. ಕಮಿಟಿ‌ ಮೀಟಿಂಗ್ ನಲ್ಲಿ ಬರ ನೀರಿನ‌ ಪರಿಸ್ಥಿತಿಯ ವರದಿ‌ಯನ್ನು ಅಧಿಕಾರಿಗಳ ಬಳಿ‌ ಕೇಳಿದ್ದೇವೆ ಎಂದು ಮಾಹಿತಿ ನೀಡಿದರು.

ಗುತ್ತಿಗೆದಾರರಿಂದ ಹಣ ವಸೂಲಿ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿ, ಪ್ರಶ್ನೆ ಕೇಳುತ್ತಿದ್ದಂತೆ ಅಯ್ಯೋ ಬಿಡಪ್ಪ, ಕೆಲಸ ಇಲ್ಲದವರು ಮಾತನಾಡುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದು ವರ್ಷ ಪೇಮೆಂಟ್ ಕೊಟ್ಟಿರಲಿಲ್ಲ. 2.5 ಲಕ್ಷ ಕೋಟಿ ಅನುದಾನವನ್ನ ಒಂದೇ ಸಲ ಎಷ್ಟೆಂದು ಕೊಡಲು ಆಗುತ್ತದೆ? ಬಾಯಿ ಚಪಲಕ್ಕೆ ಏನೇನೋ ಮಾತನಾಡುವವರಿಗೆಲ್ಲ ಉತ್ತರ ಕೊಡಲು ಆಗದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT