ರಾಜಕೀಯ

ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ: ಕಾಂಗ್ರೆಸ್ ಶಾಸಕ

Lingaraj Badiger

ವಿಜಯಪುರ: ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಎರಡೂವರೆ ವರ್ಷಗಳ ನಂತರ ಪುನಾರಚನೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಲಕರ್ಣಿ, ಇತ್ತೀಚೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರೂ ಇದೇ ಮಾತನ್ನು ಹೇಳಿರುವುದನ್ನು ಉಲ್ಲೇಖಿಸಿ ಮಾತನಾಡಿದರು.

ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ಸಿಗಲಿದೆ ಎಂಬ ಮುನಿಯಪ್ಪ ಹೇಳಿಕೆಯಿಂದ ಸಚಿವ ಸ್ಥಾನ ಸಿಗದ ಕಾಂಗ್ರೆಸ್ ಶಾಸಕರಲ್ಲಿ ಸಂತಸ ಮೂಡಿಸಿದೆ.

ಸಚಿವ ಸಂಪುಟ ಪುನಾರಚನೆಯಿಂದ ಎಲ್ಲ ಶಾಸಕರಿಗೂ ಸಚಿವರಾಗುವ ಅವಕಾಶ ದೊರೆಯಲಿದೆ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲು ಮನಸ್ಸು ಮಾಡುತ್ತಿದ್ದಾರೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಕುಲಕರ್ಣಿ, ಪಕ್ಷದ ಬಗ್ಗೆ ಅಸಮಾಧಾನ ಹೊಂದಿರುವ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಯೋಚಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ನೀವು ಶೀಘ್ರದಲ್ಲೇ ಸಾಕ್ಷಿಯಾಗುತ್ತೀರಿ, ಅಲ್ಲಿ ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಬರುತ್ತಾರೆ. ಬಿಜೆಪಿಯ ಕನಿಷ್ಠ 13 ರಿಂದ 14 ಮಾಜಿ ಶಾಸಕರು ಕಾಂಗ್ರೆಸ್ ಸೇರುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವರು ಹೇಳಿದ್ದಾರೆ.

SCROLL FOR NEXT