ಸೋಮಶೇಖರ್ 
ರಾಜಕೀಯ

ಎಸ್.ಟಿ. ಸೋಮಶೇಖರ್ ಅಸಮಾಧಾನ ತಣಿಸಲು ಬಿಜೆಪಿಯಿಂದ ಇಬ್ಬರು ಮುಖಂಡರ ಉಚ್ಛಾಟನೆ!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿತ್ತು. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದರೂ ನನ್ನನ್ನು ಸೋಲಿಸಲು ಪಕ್ಷದ ಒಳಗಿನವರೇ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ ಎಂದು ಎಸ್. ಟಿ. ಸೋಮಶೇಖರ್ ಆರೋಪಿಸಿದ್ದರು.

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿತ್ತು. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದರೂ ನನ್ನನ್ನು ಸೋಲಿಸಲು ಪಕ್ಷದ ಒಳಗಿನವರೇ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ ಎಂದು ಎಸ್. ಟಿ. ಸೋಮಶೇಖರ್ ಆರೋಪಿಸಿದ್ದರು.

ಅಲ್ಲದೇ ಈ ಸಂಬಂಧ ಪಕ್ಷದ ರಾಜ್ಯದ ಘಟಕಕ್ಕೂ ದೂರು ನೀಡಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗುತಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಆಲರ್ಟ್ ಆದ ರಾಜ್ಯ ಬಿಜೆಪಿ ನಾಯಕರು ಸೋಮಶೇಖರ್ ಅವರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಯಶವಂತಪುರ ಬಿಜೆಪಿ ಮಂಡಳ ಮಾಜಿ ಅಧ್ಯಕ್ಷ ಮಾರೇಗೌಡ ಹಾಗೂ ಉಪಾಧ್ಯಕ್ಷ ಧನಂಜಯ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರಿಬ್ಬರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಬಿ. ನಾರಾಯಣ ಆದೇಶ ಹೊರಡಿಸಿದ್ದಾರೆ.  ಇತ್ತೀಚಿಗೆ ಮಾರೇಗೌಡ ಎಸ್.ಟಿ. ಸೋಮಶೇಖರ್ ಅವರ ಭಾವಚಿತ್ರವಿರುವ ಪಕ್ಷದ ಬ್ಯಾನರ್ ಹಾಕಿಕೊಂಡು ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಇದಕ್ಕೆ ಎಸ್. ಟಿ. ಸೋಮಶೇಖರ್ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ, ಅವರ ವಿರುದ್ಧ ಕ್ರಮ ಕೈಗೊಳ್ಳದ ಬಿಜೆಪಿ ನಾಯಕರ ವಿರುದ್ಧವೂ ಕಿಡಿಕಾರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT