ಶರಣಬಸಪ್ಪ ದರ್ಶನಾಪುರ 
ರಾಜಕೀಯ

100 ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಒಂದೇ ಒಂದು ಸಭೆ ನಡೆಸಿಲ್ಲ: ಆಪ್ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಒಂದೇ ಒಂದು ಸಾರ್ವಜನಿಕ ಸಭೆ ನಡೆಸಿಲ್ಲ ಎಂದು ಆಮ್ ಆದ್ಮಿ ಪಕ್ಷ(ಎಎಪಿ)ದ ಕರ್ನಾಟಕ...

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಒಂದೇ ಒಂದು ಅಧಿಕಾರಿಗಳ ಸಭೆ ನಡೆಸಿಲ್ಲ ಎಂದು ಆಮ್ ಆದ್ಮಿ ಪಕ್ಷ(ಎಎಪಿ)ದ ಕರ್ನಾಟಕ ಘಟಕ ಶುಕ್ರವಾರ ಆರೋಪಿಸಿದೆ.

ಸಾರ್ವಜನಿಕ ಉದ್ದಿಮೆಗಳ ಸಚಿವರು ಸಾರ್ವಜನಿಕರಿಗೆ ಅಥವಾ ಉದ್ಯಮಿಗಳಿಗೆ ಲಭ್ಯವಿಲ್ಲ ಎಂದು ಆರೋಪಿಸಿದ ಎಎಪಿ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಅವರು, ದರ್ಶನಾಪುರ ಹೆಸರಿಗೆ ಮಾತ್ರ ಸಚಿವರಾಗಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ಸರ್ಕಾರ ಸಾರ್ವಜನಿಕ ಉದ್ದಿಮೆ ಖಾತೆಯನ್ನು ರದ್ದುಪಡಿಸಿದ್ದರೂ ಸಚಿವ ದರ್ಶನಾಪುರ ಅವರನ್ನು ಆ ಖಾತೆಗೆ ನೇಮಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ದಾಸರಿ ಹೇಳಿದ್ದಾರೆ.

ಇನ್ನು ವಿಧಾನಸೌಧದಲ್ಲಿರುವ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಅಧಿಕೃತ ಕೊಠಡಿಯ ಬಾಗಿಲಿಗೆ ಅಳವಡಿಸಿರುವ ಬೋರ್ಡ್ ಸಹ ಗೊಂದಲಮಯವಾಗಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ, ಸಚಿವರ ಖಾತೆ ಹಂಚಿಕೆ ಸಂದರ್ಭದಲ್ಲಿ ರಾಜ್ಯಪಾಲರಿಗೆ ಸಲ್ಲಿಸಿದ ಖಾತೆ ಹಂಚಿಕೆ ವಿವರದಲ್ಲಿ ದರ್ಶನಾಪುರ ಅವರನ್ನು ಸಾರ್ವಜನಿಕ ಉದ್ದಿಮೆಗಳ ಸಚಿವರನ್ನಾಗಿ ನೇಮಿಸಲಾಗಿದೆ.

ಹಿಂದಿನ ಸರ್ಕಾರ ಸಾರ್ವಜನಿಕ ಉದ್ದಿಮೆಗಳ ಖಾತೆಯನ್ನು ದ್ದುಪಡಿಸಿದ್ದನ್ನು ಮರೆಮಾಚುವ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜ್ಯಪಾಲರ ದಾರಿ ತಪ್ಪಿಸಿದ್ದಾರಾ? ಎಂದು ಆಪ್ ನಾಯಕ ಪ್ರಶ್ನಿಸಿದರು.

ಇದೇ ವೇಳೆ ಸಾರ್ವಜನಿಕ ಉದ್ದಿಮೆ ಸಚಿವಾಲಯವನ್ನು ಹಣಕಾಸು ಖಾತೆಯೊಂದಿಗೆ ವಿಲೀನಗೊಳಿಸಿರುವ ಸಚಿವ ಶರಣಬಸಪ್ಪ ದರ್ಶನಾಪುರ ಅವರು, ಈ ಸಂಬಂಧ ಯಾವುದೇ ಅಧಿಕಾರಿಗಳ ಸಭೆ ನಡೆಸಿಲ್ಲ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದರರ್ಥ ಸಾರ್ವಜನಿಕ ಉದ್ಯಮ ಸಚಿವಾಲಯವು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗೆ ಸೇರಿದೆ. ಈ ವಿಚಾರದಲ್ಲಿ ಸಾರ್ವಜನಿಕರಲ್ಲಿ ಗೊಂದಲವಿದ್ದು, ಸಾರ್ವಜನಿಕ ಉದ್ದಿಮೆಗಳ ಸಚಿವಾಲಯ ಇದೆಯೇ? ಅಥವಾ ರದ್ದುಗೊಳಿಸಲಾಗಿದೆಯೇ? ಅಥವಾ ಹಣಕಾಸು ಇಲಾಖೆಯೊಂದಿಗೆ ವಿಲೀನಗೊಳಿಸಲಾಗಿದೆಯೇ? ಎಂಬುದು ಸಂಪೂರ್ಣ ಗೊಂದಲಮಯವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT