ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಚಂದ್ರಯಾನ-3ರ ಯಶಸ್ಸಿನ ಕ್ರೆಡಿಟ್ ಪಡೆಯಲು ಕಾಂಗ್ರೆಸ್, ಬಿಜೆಪಿ ಪ್ರಯತ್ನಿಸುತ್ತಿವೆ: ಎಚ್‌ಡಿ ಕುಮಾರಸ್ವಾಮಿ

ಚಂದ್ರಯಾನ-3ರ ಯಶಸ್ಸಿನ ಶ್ರೇಯಸ್ಸು ಪಡೆಯಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಪರಸ್ಪರ ಪೈಪೋಟಿ ನಡೆಸುತ್ತಿವೆ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶನಿವಾರ ಟೀಕಿಸಿದ್ದಾರೆ. 

ಹಾಸನ: ಚಂದ್ರಯಾನ-3ರ ಯಶಸ್ಸಿನ ಶ್ರೇಯಸ್ಸು ಪಡೆಯಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಪರಸ್ಪರ ಪೈಪೋಟಿ ನಡೆಸುತ್ತಿವೆ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶನಿವಾರ ಟೀಕಿಸಿದ್ದಾರೆ. 

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಯಾನದ ಯಶಸ್ಸಿಗಾಗಿ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಭಾರತೀಯ ವಿಜ್ಞಾನಿಗಳನ್ನು ಅಭಿನಂದಿಸಿದರು.

ಕರ್ನಾಟಕವೇ ನೈರುತ್ಯ ಮುಂಗಾರು ಹಂಗಾಮಿನಲ್ಲಿ ಸಂಕಷ್ಟ ಎದುರಿಸುತ್ತಿರುವಾಗ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದ ರೈತರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು. 

'ಕಾಂಗ್ರೆಸ್ ನಾಯಕರು ಚಂದ್ರಯಾನ-3 ಕುರಿತು ಹೇಳಿಕೆಗಳನ್ನು ನೀಡುವಲ್ಲಿ ನಿರತರಾಗಿರುವ ಕಾರಣ ನಾನು ಒಂದು ವಾರದವರೆಗೆ ಸರ್ಕಾರವನ್ನು ಟೀಕಿಸದಿರಲು ನಿರ್ಧರಿಸಿದೆ' ಎಂದು ಅವರು ವ್ಯಂಗ್ಯವಾಡಿದರು.

2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಮತ್ತು ಯಾವುದೇ ಪಕ್ಷದೊಂದಿಗೆ ಚುನಾವಣಾ ಪೂರ್ವ ಅಥವಾ ನಂತರದ ಮೈತ್ರಿ ಸಾಧ್ಯತೆಯನ್ನು ತಳ್ಳಿಹಾಕಿದರು. 

ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಿಖಿಲ್‌ಗೆ ಸಿನಿಮಾದತ್ತ ಗಮನ ಹರಿಸುವಂತೆ ಹೇಳಿದ್ದೇನೆ ಎಂದರು. ಜೆಡಿಎಸ್ ಶಾಸಕರು ಮತ್ತು ಮುಖಂಡರು ಬೇರೆ ಪಕ್ಷಗಳಿಗೆ ಸೇರಲು ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, 'ಯಾವುದೇ ಶಾಸಕರು ರಾಜೀನಾಮೆ ನೀಡುವುದನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ಇದು ಅವರ ಆಯ್ಕೆಯಾಗಿದೆ' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT