ಡಾ ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಮೈಸೂರು: ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ನನ್ನದು ಯಾವುದೇ ಬೇಡಿಕೆ ಇಲ್ಲ. ಪಕ್ಷದ ತೀರ್ಮಾನಕ್ಕೆ ನಾನು‌ ಬದ್ಧನಾಗಿದ್ದೇನೆ. ಪಕ್ಷ ಸೂಚಿಸಿದರೆ ನಾನು ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗುತ್ತೇನೆ. ಪಕ್ಷದ ಮಾತನ್ನು ನಾನು ಕೇಳಲೇಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕಸಭಾ‌ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲಬೇಕು. ವಿಧಾನಸಭಾ ಚುನಾವಣೆಯಲ್ಲಿ ನಮ್ಮನ್ನ ಜನ ಗೆಲ್ಲಿಸಿದ್ದಾರೆ. ಬಿಜೆಪಿ ದುರಾಡಳಿತ ನೋಡಿ ಬೇಸತ್ತು ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಗ್ಯಾರೆಂಟಿ ಯೋಜನೆಗಳನ್ನ ಜಾರಿಗೊಳಿಸುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲೋಕೆ ತಂತ್ರಗಾರಿಕೆ ಮಾಡಬೇಕು ಎಂದಿದ್ದಾರೆ.

ಇದೇ ವೇಳೆ ಜೆಡಿಎಸ್-ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಶಾಸಕ, ಪ್ರತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿವೆ. ಅಧಿಕೃತವಾಗಿ ಅಥವಾ ಪರೋಕ್ಷವಾಗಿ ಮೈತ್ರಿ ಮಾಡಿಕೊಂಡಿರುತ್ತಾರೆ. 2018 ಹಾಗೂ 2023ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದರು. ಮುಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT