ಸಂಗ್ರಹ ಚಿತ್ರ 
ರಾಜಕೀಯ

ಸಿದ್ದರಾಮಯ್ಯ ಪುತ್ರ ವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌...!

ಮುಖ್ಯಮಂತ್ರಿ ಸಿದ್ದರಾಮಯ್ಯ ‍ಪುತ್ರ, ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಸರ್ಕಾರವು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಜಿಲ್ಲಾ ಸಮಿತಿ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ‍ಪುತ್ರ, ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಸರ್ಕಾರವು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಜಿಲ್ಲಾ ಸಮಿತಿ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿಎಂ ಸಿದ್ದರಾಮಯ್ಯ ಅವರಿಗೆ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌ ಎಂದು ಟೀಕಿಸಿದೆ.

ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ ಯತೀಂದ್ರ ಅವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ. ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು ಎಂದು ವಾಗ್ದಾಳಿ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೆಲವರಿಗೆ ಜೀರ್ಣಿಸಿಕೊಳ್ಳಲು ಕಷ್ಟವಾಗಿದೆ: 7.8ರಷ್ಟು GDP ಬೆಳವಣಿಗೆಯ ಟೀಕಾಕಾರರನ್ನು ಖಂಡಿಸಿದ ಪ್ರಧಾನಿ ಮೋದಿ!

ಏಷ್ಯಾಕಪ್ 2026: ಪಾಕಿಸ್ತಾನ ನೀಡಿದ ಅಲ್ಪಮೊತ್ತದ ರನ್ ಬೆನ್ನಟ್ಟಿ ಗೆದ್ದ ಭಾರತ

ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!

ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಕಳಪೆ ದಾಖಲೆ ಸೃಷ್ಟಿ!

'ದುಡ್ಡಿನ ಧಿಮಾಕು.. ಕಾರಿಗೇ ಬೆಂಕಿ ಹಾಕಿ ಬಾ ಅಂತ ಹೇಳಿದ್ದೆ': ನಟ 'ಯಶ್' ತಾಯಿ ಪುಷ್ಪ ಅರುಣ್ ಕುಮಾರ್!