ಸಚಿವ ದಿನೇಶ್ ಗುಂಡೂರಾವ್. 
ರಾಜಕೀಯ

ಬಿಜೆಪಿ ಚಾರ್ಜ್ ಶೀಟ್ ರಿಲೀಸ್: ​ಇದು ಕಳ್ಳರೇ ಪೊಲೀಸರ ವಿರುದ್ಧ ತನಿಖೆ ಮಾಡಿದಂತೆ- ಸಚಿವ​ ಗುಂಡೂರಾವ್​​ ಲೇವಡಿ

ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆಗೊಳಿಸಲಿದ್ದೇವೆಂಬ ಬಿಜೆಪಿ ಹೇಳಿಕೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಲೇವಡಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆಗೊಳಿಸಲಿದ್ದೇವೆಂಬ ಬಿಜೆಪಿ ಹೇಳಿಕೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಲೇವಡಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ನಮ್ಮ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಚಾರ್ಜ್‌ಶೀಟ್ ಬಿಡುಗಡೆ ಮಾಡುತ್ತಾರಂತೆ. ಇದು ಕಳ್ಳರೇ ಪೊಲೀಸರ ವಿರುದ್ಧ ತನಿಖೆ ಮಾಡಿದಂತೆ. ಇದೆಂತಾ ಹಾಸ್ಯಾಸ್ಪದ? ಹಿಂದಿನ ಸರ್ಕಾರದ 40% ಕಮೀಷನ್ ಮತ್ತು ಕೋವಿಡ್ ಹಗರಣದ ತನಿಖೆಯನ್ನು ಇಬ್ಬರು ನಿವೃತ್ತ ನ್ಯಾಯಮೂರ್ತಿಗಳು ನಡೆಸುತ್ತಿದ್ದಾರೆ. ಈ ತನಿಖೆಯ ನಂತರ ಬೀಳಲಿರುವುದು ನಿಜವಾದ ಚಾರ್ಜ್‌ಶೀಟ್‌” ಎಂದು ಹೇಳಿದ್ದಾರೆ.

ಮೊನ್ನೆ ಮೋದಿಯವರು ರಾಜ್ಯ ಬಿಜೆಪಿ ನಾಯಕರನ್ನು ಕಣ್ಣೆತ್ತಿಯೂ ನೋಡದೇ ಹೋಗಿದ್ದರು. ಇದು ರಾಜ್ಯ ಭಾರತೀಯ ಜನತಾ ಪಕ್ಷದ ನಾಯಕರಲ್ಲಿ ಅಭದ್ರತೆಯ ಭಯ ಮೂಡಿಸಿದೆ‌‌. ಈಗ ಮೋದಿಯವರನ್ನು ಮೆಚ್ಚಿಸಲು ನಮ್ಮ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡುವ ಬೀದಿ ನಾಟಕ ಶುರು ಮಾಡಿದ್ದಾರೆ. ಆದರೆ ಈ ನಾಟಕ ರಂಗ ತಾಲೀಮಿಲ್ಲದ ಅರೆಬೆಂದ ಕಲಾವಿದರ ನೀರಸ ಪ್ರದರ್ಶನವಾಗಲಿದೆ ಎಂದು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT