ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಸಿದ್ದರಾಮಯ್ಯ ಏನಾದರೂ ಪಾಕಿಸ್ತಾನದ ಮುಖ್ಯಮಂತ್ರಿನಾ?: ಬಸನಗೌಡ ಪಾಟೀಲ್ ಯತ್ನಾಳ್

ಸಿಎಂ ಸಿದ್ದರಾಮಯ್ಯ ಏನು ಪಾಕಿಸ್ತಾನದ ಮುಖ್ಯಮಂತ್ರಿನಾ? ಅವರು ರಾಜ್ಯದ ಮುಖ್ಯಮಂತ್ರಿ. ಆದ್ದರಿಂದ ಶಾಸಕರು ಅವರ ಬಳಿ ಹೋಗೋದು ಸಹಜ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಂಗಳವಾರ ಹೇಳಿದ್ದಾರೆ.

ವಿಜಯಪುರ: ಸಿಎಂ ಸಿದ್ದರಾಮಯ್ಯ ಏನು ಪಾಕಿಸ್ತಾನದ ಮುಖ್ಯಮಂತ್ರಿನಾ? ಅವರು ರಾಜ್ಯದ ಮುಖ್ಯಮಂತ್ರಿ. ಆದ್ದರಿಂದ ಶಾಸಕರು ಅವರ ಬಳಿ ಹೋಗೋದು ಸಹಜ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಂಗಳವಾರ ಹೇಳಿದ್ದಾರೆ.

ದೇವರ ಹಿಪ್ಪರಗಿ ಪಟ್ಟಣದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಸಿದ್ದರಾಮಯ್ಯ ಅವರ ಹಿಂದಿನ ಗತ್ತು, ಆರ್ಭಟ ಈ ಬಾರಿ ಕಾಣುತ್ತಿಲ್ಲ. ಈ ಬಗ್ಗೆ ಅವರನ್ನು ನಾನು ಖುದ್ದು ವಿಚಾರಿಸಿದಾಗ "ಇದು ನನ್ನ ಕೊನೆಯ ಅವಧಿಯಾಗಿದೆ ಎಂದು ಭಾವುಕರಾಗಿದ್ದರು. ಐದು ವರ್ಷ ಉತ್ತಮ ಆಡಳಿತ ನೀಡಬೇಕಾಗಿದೆ ಎಂದು ಹೇಳಿದ್ದರು.

ಆ ವೇಳೆ ಐದು ವರ್ಷ ನೀವೇ ಸಿಎಂ ಇರುತ್ತೀರಿ ತಾನೆ? ಎಂದು ನಾನು ನಗೆ ಚಟಾಕಿ ಹಾರಿಸಿದೆ. ಆಗ ನೀನು ಮತ್ತೆ ಬೆಂಕಿ ಹಚ್ಚುವ ಕೆಲಸ ಮಾಡಬೇಡ" ಎಂದು ಹೇಳಿದರು. ಅದಕ್ಕೆ ನಾನು ಸುಮ್ಮನಾದೆ. ರಾಜಕಾರಣ ಬೇರೆ, ಆತ್ಮೀಯತೆ ಬೇರೆ. ಅಧಿವೇಶನದ ವೇಳೆ ನಾನು ಅಸ್ವಸ್ಥನಾಗಿ ಆಸ್ಪತ್ರೆಗೆ ದಾಖಲಾದಾಗ ಖುದ್ದು ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಲು ಬಂದಿದ್ದರು. ಆ ವೇಳೆ ನಡೆದ ಪ್ರಸಂಗ ನೆನೆಪಿಸಿಕೊಂಡಿದ್ದೇನೆಂದು ತಿಳಿಸಿದರು.

ಒಮ್ಮೆ ಜನಪ್ರತಿನಿಧಿಯಾದ ಮೇಲೆ ಅವರಿಗೆ ಸಿಗುವ ಗೌರವ ಎಲ್ಲರೂ ನೀಡಲೇಬೇಕು. ಈಗ ಕೆಲವರು ಇದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರು ಆಗಿರುವುದಿಲ್ಲ. ಆದರೂ ಅವರ ನಡುವಳಿಕೆ ನೋಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಶಾಸಕರು ಸಿಎಂ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಸಕರಾದವರು ಯಾವುದೇ ಪಕ್ಷದವರಾಗಿದ್ದರೂ ಸಹ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಸಿಎಂ ಭೇಟಿಯಾಗಲೇಬೇಕು.‌ ಅದನ್ನೇ ಹೈಡ್​ಲೈನ್ ಮಾಡಲಾಗುತ್ತದೆ. ಸಿಎಂ ಏನು ಪಾಕಿಸ್ತಾನ ಮುಖ್ಯಮಂತ್ರಿನಾ?. ಮುಖ್ಯಮಂತ್ರಿ ಅಂದ್ರೆ ಶಾಸಕರು ಅವರು ಬಳಿ ಹೋಗೋದು ಸಹಜ ಎಂದು ​ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT