ಸಂಗ್ರಹ ಚಿತ್ರ 
ರಾಜಕೀಯ

ಕಾವೇರಿ ವಿವಾದ: ರಾಜಕೀಯ ಲಾಭ ಪಡೆಯಲು ಕನ್ನಡಿಗರ ಹಿತವನ್ನೇ ಬಲಿಕೊಟ್ಟಿದ್ದಾರೆ; ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಆಪ್

ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಆಯೋಜಿಸಿದ್ದ ವಿಶೇಷ ದುಂಡು ಮೇಜಿನ ಸಭೆಯಲ್ಲಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡಬಾರದು ಎಂಬ ನಿರ್ಣಯ ಕೈಗೊಳ್ಳಲಾಯಿತು.

ಬೆಂಗಳೂರು: ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಆಯೋಜಿಸಿದ್ದ ವಿಶೇಷ ದುಂಡು ಮೇಜಿನ ಸಭೆಯಲ್ಲಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡಬಾರದು ಎಂಬ ನಿರ್ಣಯ ಕೈಗೊಳ್ಳಲಾಯಿತು.

ಶಾಸಕರ ಭವನದಲ್ಲಿ ರೈತಪರ ಸಂಘಟನೆಗಳು, ಕನ್ನಡ ಪರ ಹೋರಾಟ ಸಂಘಗಳು, ನಾಡಿನ ನೀರಾವರಿ ತಜ್ಞರು, ಸಾಹಿತಿಗಳು ಹಾಗೂ ಚಿಂತಕರನ್ನೊಳಗೊಂಡ 'ನಮ್ಮ ಜಲ ನಮ್ಮದು - ಬನ್ನಿ ಮಾತಾಡೋಣ' ವಿಶೇಷ ದುಂಡುಮೇಜಿನ ಸಭೆ ಮಂಗಳವಾರ ನಡೆಯಿತು.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ರವರು ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಇತರ ನಾಯಕರ ನೇತೃತ್ವದಲ್ಲಿ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ‘ಕಾವೇರಿ ನೀರು ನಿಯಂತ್ರಣ ಸಮಿತಿ’ಯ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಬೇಜವಾಬ್ದಾರಿಯಿಂದ ಹೇಳುತ್ತಿರುವ ರಾಜ್ಯ ಸರ್ಕಾರ ಅಧಿಕಾರ ಉಳಿಸಿಕೊಳ್ಳಲು ಹಾಗೂ ರಾಜಕೀಯ ಲಾಭ ಪಡೆಯಲು ಕನ್ನಡಿಗರ ಹಿತವನ್ನೇ ಬಲಿ ಕೊಟ್ಟಿದೆ ಎಂದು ಗುಡುಗಿದ್ದಾರೆ.

ಕರ್ನಾಟಕದಲ್ಲಿ ಈ ವರ್ಷ ನಿರೀಕ್ಷೆಯ ಮಳೆಯಾಗದೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಏಕಾಏಕಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸುತ್ತೇವೆ. ಕನ್ನಡಿಗರಿಗೆ ಕುಡಿಯುವ ನೀರಿಗೂ ಸಂಕಷ್ಟವಿದೆ ಎಂಬ ಗಂಭೀರ ವಿಚಾರವನ್ನು ಈ ಸಭೆ ಮೂಲಕ ರಾಜ್ಯ ಸರ್ಕಾರದ ಗಮನಕ್ಕೆ ತರುತ್ತಿದ್ದೇವೆ ಎಂದು ಹೇಳಿದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ನಿರ್ದೇಶನದಂತೆ ಸರ್ಕಾರ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ಒಂದು ವೇಳೆ ಬಿಟ್ಟಿದ್ದೇ ಆದರೆ, ರೈತರಿಗೆ ಪ್ರತಿಭಟನೆಗೆ ಕರೆ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೆ, ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ರಾಜ್ಯ ಸರಕಾರ ಕೂಡಲೇ ಮುಂದಾಗಬೇಕು ಎಂದು ಒತ್ತಾಯಿಸಿದರು.

ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಕುಡಿಯುವ ನೀರಿನ ಪ್ರಮಾಣವನ್ನು 30 ಟಿಎಂಸಿ ಅಡಿಗೆ ಪರಿಷ್ಕರಿಸಬೇಕು. ಕೇಂದ್ರ ಸರ್ಕಾರವು ಕಡಿಮೆ ಮಳೆಯ ವರ್ಷದಲ್ಲಿ ನೀರು ಬಿಡುಗಡೆ ಮಾನದಂಡಗಳನ್ನು ತಕ್ಷಣ ಜಾರಿಗೊಳಿಸಬೇಕು ಮತ್ತು ಕಾವೇರಿ ಪ್ರಾಧಿಕಾರವನ್ನು ಸ್ವಾಯತ್ತ ಪ್ರಾಧಿಕಾರವಾಗಿ ರಚಿಸಬೇಕು ಎಂದು ಸಭೆಯ ಮೂಲಕ ಒತ್ತಾಯಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT