ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಇಂದಿರಾಗಾಂಧಿ ಕಾಲದ ಗತವೈಭವ ಎಂದರೆ ತುರ್ತು ಪರಿಸ್ಥಿತಿಯೇ? ನಳಿನ್ ಕುಮಾರ್ ಕಟೀಲ್

ಇಂದಿರಾಗಾಂಧಿ ಕಾಲದ ಗತವೈಭವ ಮರುಕಳಿಸುತ್ತಿದೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಆ ಗತವೈಭವದಲ್ಲಿ ತುರ್ತು ಪರಿಸ್ಥಿತಿ ಯನ್ನೂ ಹೇರಲಾಗಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದರಿಂದ ರಾಜ್ಯದ ರೈತರಿಗೆ ಸಮಸ್ಯೆ ಆಗಲಿದೆ. ರಾಜ್ಯದ ರೈತರ ಇಚ್ಛೆ ಪೂರೈಸದೆ, ಅವರಿಗೆ ನ್ಯಾಯ ಕೊಡದೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ನೀರಿನ ಸಮಸ್ಯೆ ಇದ್ದು, ಬರ ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಪಂಪ್ ಸಟ್ ಗಳಿಗೆ ಕರೆಂಟ್ ಇಲ್ಲ, ಜನ ತತ್ತರಿಸಿ ಹೋಗಿದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ‌ ಎಂದರು.

ಚುನಾವಣೆ ಪೂರ್ವ ಕಾಂಗ್ರೆಸ್ ಘೋಷಣೆ ಮಾಡಿದ್ದ ಗ್ಯಾರಂಟಿಗಳಿಗೆ ಮಾನದಂಡ ಇರಲಿಲ್ಲ. ಈವರೆಗೆ ಘೋಷಿಸಿದ ನಾಲ್ಕು ಗ್ಯಾರಂಟಿಗಳಿಗೆ ಮಾನದಂಡ ಹಾಕಲಾಗಿದೆ‌. ಗೃಹ ಜ್ಯೋತಿ ಹೆಸರಲ್ಲಿ ಇಡೀ ರಾಜ್ಯವನ್ನು ಕತ್ತಲಿನಲ್ಲಿ ಇಡಲಾಗಿದೆ.

ಝೀರೊ ಬಿಲ್ ಜೊತೆಗೆ ಈಗ ಝೀರೊ ಕರೆಂಟ್ ಆಗಿದೆ ಎಂದು ಟೀಕಿಸಿದರು. ಇಂದಿರಾಗಾಂಧಿ ಕಾಲದ ಗತವೈಭವ ಮರುಕಳಿಸುತ್ತಿದೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಆ ಗತವೈಭವದಲ್ಲಿ ತುರ್ತು ಪರಿಸ್ಥಿತಿ ಯನ್ನೂ ಹೇರಲಾಗಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT