ಸಿದ್ದರಾಮಯ್ಯ ಮತ್ತು ಪ್ರತಾಪ್ ಸಿಂಹ 
ರಾಜಕೀಯ

ದಯಮಾಡಿ ಈ ಬಾರಿ ಪ್ರತಾಪ್ ಸಿಂಹನನ್ನು ಗೆಲ್ಲಿಸಬೇಡಿ: ಕೈಮುಗಿದು ಸಿಎಂ ಸಿದ್ದರಾಮಯ್ಯ ಕರೆ

ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಮನವಿ ಮಾಡಿದ ಸಿದ್ದರಾಮಯ್ಯ ವಿಡಿಯೋ ವೈರಲ್ ಆಗಿದೆ.

ಮೈಸೂರು: ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಮನವಿ ಮಾಡಿದ ಸಿದ್ದರಾಮಯ್ಯ ವಿಡಿಯೋ ವೈರಲ್ ಆಗಿದೆ.

ಮೈಸೂರಿನ ಎನ್‌ಆರ್‌ ಕ್ಷೇತ್ರದ ರಾಜೀವ್ ನಗರದಲ್ಲಿ ನೂತನ ಸರ್ಕಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ‌ನೀಡಿ. ಭ್ರಷ್ಟ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿಯನ್ನು ದೂರವಿಡಿ ಎಂದರು.

ಮುಂದುವರೆದು ಮಾತನಾಡಿದ ಅವರು ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅಡುಗೆ ಅನಿಲ ದರ ಕಡಿಮೆ ಮಾಡಿದ್ದಾರೆ. ದಯಮಾಡಿ ಮೈಸೂರಿನಲ್ಲಿ ಈ ಬಾರಿ ಪ್ರತಾಪ್ ಸಿಂಹ ಅವರನ್ನು ಗೆಲ್ಲಿಸಬೇಡಿ ಎಂದು ಕರೆ ನೀಡಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾಗಿ ಒಂಬತ್ತು ವರ್ಷ ಆಯಿತು. ಇಷ್ಟು ವರ್ಷದಲ್ಲಿ ಅವರು ಬರಿ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದು ಮುಸ್ಲಿಂ, ಹಿಜಾಬ್, ಹಲಾಲ್ ಕಟ್ ವಿಚಾರಗಳನ್ನು ಮುಂದಿಟ್ಟು ಸಮಾಜದ ಸಾಮರಸ್ಯವನ್ನೇ ಹಾಳು ಮಾಡುವ ಕೆಲಸ ಮಾಡಿದ್ದಾರೆ. ಈ ಬಾರಿ ದಯಮಾಡಿ ಮೈಸೂರಿನ ಜನ ಪ್ರತಾಪ್ ಸಿಂಹನನ್ನು ಆಯ್ಕೆ ಮಾಡಬೇಡಿ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿರುವ ವಿಡಿಯೋ ಇದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT