ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ 
ರಾಜಕೀಯ

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಎಚ್. ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಎಚ್. ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಗುರುವಾರ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಎಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜಸೇವೆ ಹೆಸರಲ್ಲಿ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರಿಗೆ ಸ್ಥಾನ ನೀಡಲಾಗಿದೆ.

ಮೇಲ್ಮನೆಯ ಮೂರು ಹೊಸ ನಾಮನಿರ್ದೇಶಿತ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ, ಪಿ ಆರ್ ರಮೇಶ್ ಮತ್ತು ಸಿ ಎಂ ಲಿಂಗಪ್ಪ ಅವರ ನಿವೃತ್ತಿಯಿಂದಾಗಿ ತೆರವಾದ ಸ್ಥಾನಗಳಿಗೆ ಮೂವರನ್ನು ನಾಮ ನಿರ್ದೇಶನಗೊಳಿಸಲಾಗಿದೆ.

ಉಮಾಶ್ರೀ ಅವರು ಬಾಗಲಕೋಟೆ ಜಿಲ್ಲೆಯ ತೇರದಾಳದಿಂದ ವಿಧಾನಸಭಾ ಚುನಾವಣೆಗೆ  ಕಾಂಗ್ರೆಸ್ ನಿಂದ ಸ್ಪರ್ಧಿಸಲು ಬಯಸಿದ್ದರು, ಆದರೆ ಟಿಕೆಟ್ ಕೈ ತಪ್ಪಿತ್ತು, ಸೀತಾರಾಮ್ ಅವರ ಪುತ್ರ ಎಂ ಎಸ್ ರಕ್ಷಾ ರಾಮಯ್ಯ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್ ಅವರು ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT