ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಗುತ್ತಿಗೆದಾರ ಅಂಬಿಕಾಪತಿ ಸಾವು ಸ್ವಾಭಾವಿಕವಲ್ಲ, ಐಟಿ ಇಲಾಖೆ ಸಚಿವರೊಬ್ಬರನ್ನು ವಿಚಾರಣೆ ನಡೆಸಿದೆ: ಯತ್ನಾಳ್

ಗುತ್ತಿಗೆದಾರ ಅಂಬಿಕಾಪತಿ ಸ್ವಾಭಾವಿಕವಲ್ಲ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದ್ದು, ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸ್ವಾಭಾವಿಕವಲ್ಲ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದ್ದು, ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆದಾಯ ತೆರಿಗೆ ಇಲಾಖೆಗೆ (Income Tax Department) ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ ಎಂದು ಹೇಳಿದ್ದಾರೆ.

ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗೂ ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ. ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು ಎಂದು ಬರೆದಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನವೆಂಬರ್‌ 27 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅಕ್ಟೋಬರ್‌ನಲ್ಲಿ ಅಂಬಿಕಾಪತಿ ನಿವಾಸಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಐಟಿ ದಾಳಿ ವೇಳೆ ಅಂಬಿಕಾಪತಿ ಮನೆಯಲ್ಲಿ ಬರೋಬ್ಬರಿ 44 ಕೊಟಿ ರೂ. ಪತ್ತೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್