ಮಧು ಬಂಗಾರಪ್ಪ 
ರಾಜಕೀಯ

ಸಚಿವ ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಾಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.

ನಾವು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನ ಸೋಲಿಸಬೇಕು ಎಂದು ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದುಕೋಡು ಹೋಗಬೇಕು‌. ಅವರೆ ಪಕ್ಷವನ್ನ ಒಡೆಯುವುದಲ್ಲ ಎಂದರು.

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT