ಪ್ರಜ್ವಲ್ ರೇವಣ್ಣ 
ರಾಜಕೀಯ

ತಾತ ಎಚ್.ಡಿ ದೇವೇಗೌಡರಿಗಾಗಿ ಹಾಸನ ಕ್ಷೇತ್ರ ಬಿಟ್ಟುಕೊಡಲು ಸಿದ್ಧ: ಪ್ರಜ್ವಲ್ ರೇವಣ್ಣ

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದರೆ ಅವರ ಪರ ಪ್ರಚಾರ ಮಾಡಲು ಸಿದ್ಧ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ಹೇಳಿದ್ದಾರೆ.

ಹಾಸನ: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದರೆ ಅವರ ಪರ ಪ್ರಚಾರ ಮಾಡಲು ಸಿದ್ಧ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಜ್ವಲ್, ತಾತನ ಶ್ರಮ ಹಾಗೂ ಆಶೀರ್ವಾದದಿಂದ ಸಂಸದನಾಗಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಯಾವುದೇ ಸಂದರ್ಭದಲ್ಲೂ ತಮ್ಮ ನಿರ್ಧಾರಕ್ಕೆ ಕಟ್ಟುನಿಟ್ಟಾಗಿ ಬದ್ಧರಾಗಿರುತ್ತೇನೆ, ಬೇಕಿದ್ದಲ್ಲಿ ಸಂಸದರಾಗಿರುವ ಹಾಸನ ಸ್ಥಾನವನ್ನೂ ತೆರವು ಮಾಡುವುದಾಗಿ ತಿಳಿಸಿದರು.

ಎರಡೂ ಪಕ್ಷಗಳ ಹಿರಿಯ ನಾಯಕರು ಪ್ರಾಮಾಣಿಕ ಪ್ರಯತ್ನ ಮಾಡಿದರೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಹೇಳಿದರು. ಚುನಾವಣಾ ಆಯೋಗವು ಮಾರ್ಚ್‌ನಲ್ಲಿ 2024 ರ ಸಾರ್ವತ್ರಿಕ ಚುನಾವಣಾ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ.  ಪಂಚರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಸಂಸತ್ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT