ಗೂಳಿಹಟ್ಟಿ ಶೇಖರ್ 
ರಾಜಕೀಯ

ಗೂಳಿಹಟ್ಟಿ ಶೇಖರ್ ಸವಾಲನ್ನು ಸ್ವೀಕರಿಸುವ ನೈತಿಕತೆಯನ್ನು ಬಿಜೆಪಿ ತೋರಿಸುತ್ತದೆಯೇ? ಕಾಂಗ್ರೆಸ್

ನಾಗ್ಪುರದ ಹೆಡಗೇವಾರ್‌ ವಸ್ತು ಸಂಗ್ರಹಾಲಯಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆರೋಪ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಅವರು ಬಿಜೆಪಿಗೆ ಮತ್ತೊಂದು ಸವಾಲು ಹಾಕಿದ್ದಾರೆ.

ಬೆಂಗಳೂರು: ನಾಗ್ಪುರದ ಹೆಡಗೇವಾರ್‌ ವಸ್ತು ಸಂಗ್ರಹಾಲಯಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆರೋಪ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಅವರು ಬಿಜೆಪಿಗೆ ಮತ್ತೊಂದು ಸವಾಲು ಹಾಕಿದ್ದಾರೆ.

ಹೆಡಗೇವಾರ್ ಸ್ಮಾರಕಕ್ಕೆ ನನ್ನನ್ನು ಒಳಗೆ ಬಿಟ್ಟಿದ್ದಿದ್ದರೆ, ಅದರ ಸಿಸಿ ಟಿವಿ ಫೂಟೇಜ್ ಬಿಡುಗಡೆ ಮಾಡಲಿ. ಒಂದು ವೇಳೆ ‌ನನ್ನ ಮಾತು ಸುಳ್ಳಾಗಿದ್ರೆ, ಬಿಜೆಪಿ ನಾಯಕರ ಮನೆಗಳಲ್ಲಿ ಕಸ ಗುಡಿಸುವ ಕೆಲಸ ಮಾಡಿಕೊಂಡಿರುತ್ತೇನೆ ಎಂದು  ಗುಡುಗಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರದಿಯೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್, ಗೂಳಿಹಟ್ಟಿ ಶೇಖರ್ ಸವಾಲನ್ನು ಸ್ವೀಕರಿಸುವ ನೈತಿಕತೆಯನ್ನು ಬಿಜೆಪಿ ತೋರಿಸುತ್ತದೆಯೇ ? ಎಂದು ಪ್ರಶ್ನಿಸಿದೆ. ಬಿಜೆಪಿ ಹಾಗೂ ಆರ್ ಎಸ್ ಎಸ್ ಗರ್ಭಗುಡಿಯಲ್ಲಿ ದಲಿತರಿಗೆ ಸ್ಥಾನಮಾನ ನೀಡಿ ನಂತರ ನಮ್ಮಲ್ಲಿ ಸಮಾನತೆ ಇದೆ ಎಂಬುದನ್ನು ಹೇಳಲಿ ಎಂದು ಟಾಂಗ್ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT