ಸಚಿವ ಪ್ರಿಯಾಂಕ್ ಖರ್ಗೆ 
ರಾಜಕೀಯ

ಖರ್ಗೆ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು, ಆದ್ರೆ ಚುನಾವಣೆ ಗೆಲ್ಲುವುದು ದೊಡ್ಡ ಸವಾಲು: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು. ಆದರೆ ಹಗಲುಗನಸು ಕಾಣುವ ಬದಲು ಮೊದಲು ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಪುತ್ರ,...

ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು. ಆದರೆ ಹಗಲುಗನಸು ಕಾಣುವ ಬದಲು ಮೊದಲು ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಬಹುಮತ ಗಳಿಸುವ ಅಗತ್ಯವನ್ನು ಒತ್ತಿ ಹೇಳಿದ ಪ್ರಿಯಾಂಕ್ ಖರ್ಗೆ, ಪ್ರತಿಪಕ್ಷಗಳ ಮುಂದಿರುವ ಅತಿ ದೊಡ್ಡ ಸವಾಲು ಇದು ಎಂದಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಖರ್ಗೆ ಅವರು ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಹೇಳಿದ್ದರು. ಅವರು ದೇಶದ "ಮೊದಲ ದಲಿತ ಪ್ರಧಾನಿ" ಆಗಬಹುದು ಎಂದಿದ್ದರು. ಆದರೆ ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.

ವಿರೋಧ ಪಕ್ಷಗಳ ಸಭೆಯ ನಂತರ ಎಂಡಿಎಂಕೆ ನಾಯಕ ವೈಕೊ ಸೇರಿದಂತೆ ಹಲವು ನಾಯಕರು ಇದನ್ನು ಖಚಿತಪಡಿಸಿದರು. ಆದರೆ ಪ್ರಧಾನಿ ಅಭ್ಯರ್ಥಿ ಪ್ರಸ್ತಾಪವನ್ನು ನಯವಾಗಿಯೇ ತಿರಸ್ಕರಿಸಿದ ಖರ್ಗೆ, ಮೊದಲು ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯ. ಮೈತ್ರಿ ಬಲವನ್ನು ಹೆಚ್ಚಿಸುವುದು ಮುಖ್ಯ, ಉಳಿದೆಲ್ಲವನ್ನೂ ನಂತರ ನಿರ್ಧರಿಸಬಹುದು ಎಂದು ನಾಯಕರಿಗೆ ಹೇಳಿದ್ದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕನ್ನಡಿಗನೊಬ್ಬ ಪ್ರಧಾನಿಯಾದರೆ ಬೇಡ ಎನ್ನುತ್ತೀರಾ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. “ಅವರು (ಮಲ್ಲಿಕಾರ್ಜುನ ಖರ್ಗೆ) ಪ್ರಧಾನಿ ಅಭ್ಯರ್ಥಿ ಆದರೆ ಒಳ್ಳೆಯದು, ಆದರೆ ನಾವು ಮೊದಲು ನಮ್ಮ ಮುಂದಿರುವ ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕು, ನಾವು ಕೇವಲ ಹಗಲುಗನಸು ಕಾಣಬಾರದು ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT