ವಿಪಕ್ಷ ನಾಯಕ ಆರ್.ಅಶೋಕ್ 
ರಾಜಕೀಯ

ಆಪರೇಷನ್ ಕಮಲದ ಅಗತ್ಯವಿಲ್ಲ, ಸಿದ್ದರಾಮಯ್ಯ ಸರ್ಕಾರ ತನಗೆ ತಾನೇ ಪತನವಾಗಲಿದೆ: ಆರ್ ಅಶೋಕ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತಾನಾಗಿಯೇ ಪತನವಾಗಲಿದ್ದು, ಆಪರೇಷನ್ ಕಮಲ ಮಾಡುವ ಅಗತ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತಾನಾಗಿಯೇ ಪತನವಾಗಲಿದ್ದು, ಆಪರೇಷನ್ ಕಮಲ ಮಾಡುವ ಅಗತ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಶೋಕ, ಆಪರೇಷನ್ ಕಮಲದ ಮೂಲಕ ಕರ್ನಾಟಕದಲ್ಲಿ ಆಡಳಿತಾರೂಢ ಸರ್ಕಾರವನ್ನು ನಾವು ಬೀಳಿಸುವುದಿಲ್ಲ ಎಂದು ಹೇಳಿದರು. ರಾಜಕೀಯ ಪಕ್ಷಗಳಲ್ಲಿ ಸಹಜವಾಗಿಯೇ ಭಿನ್ನಾಭಿಪ್ರಾಯಗಳಿದ್ದು, ರಾಜ್ಯದ ಕಾಂಗ್ರೆಸ್ ಪಕ್ಷವೂ ಇದಕ್ಕೆ ಹೊರತಾಗಿಲ್ಲ. ಕರ್ನಾಟಕ ಕಾಂಗ್ರೆಸ್ ಪಕ್ಷದೊಳಗೆ ಅಜಿತ್ ಪವಾರ್ ಅವರಂತಹ ವ್ಯಕ್ತಿಗಳು ಇದ್ದಾರೆ ಎಂದು ಅಶೋಕ ಒತ್ತಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎನ್ಐಎ ದಾಳಿ ನಡೆಸಿದೆ. ಕರ್ನಾಟಕದ ವಿವಿಧೆಡೆ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಪಿಎಫ್ ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿಎಫ್ ಐ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂದು ಅಶೋಕ ಕಿಡಿಕಾರಿದರು. ಕರ್ನಾಟಕ ಭಯೋತ್ಪಾದಕರ ಹಬ್ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.

ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆಯನ್ನು ಉಲ್ಲೇಖಿಸಿ ಅಶೋಕ ಕರ್ನಾಟಕದ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಆರೋಪಿಸಿದ ಅವರು, ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ಸಂತ್ರಸ್ತರನ್ನು ಭೇಟಿ ಮಾಡಿದ ನಂತರವೇ ಪರಿಹಾರ ಘೋಷಿಸಲಾಗಿದೆ ಎಂದು ಆರೋಪಿಸಿದರು.

ಸರ್ಕಾರ ದಿವಾಳಿತನ ಎದುರಿಸುತ್ತಿದೆ ಮತ್ತು ಜನರಿಗೆ ಖಾತರಿ ಯೋಜನೆಗಳನ್ನು ತಲುಪಿಸಲು ವಿಫಲವಾಗಿದೆ ಎಂದು ಅವರು ಟೀಕಿಸಿದರು. ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ತಂಡ ಬಂದ ನಂತರ ಸರ್ಕಾರ ಪರಿಹಾರ ಘೋಷಿಸಿದೆ ಎಂದು ಅಶೋಕ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT